Latest

ಡ್ರಗ್ಸ್ ಆರೋಪದ ಪ್ರಕರಣ: ನಟ ಶೈನ್ ಟಾಮ್ ಚಾಕೊ ಹೋಟೇಲ್‌ನಿಂದ ರಾತ್ರೋರಾತ್ರಿ ಪರಾರಿ..!

ಕೊಚ್ಚಿ: ಮಾಲಿವುಡ್‌ನ ಪಾಠಿ ಖ್ಯಾತ ನಟ ಶೈನ್ ಟಾಮ್ ಚಾಕೊ ವಿರುದ್ಧ ಮಾದಕವಸ್ತು ಸೇವನೆಯ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ರಾತ್ರಿ (ಏಪ್ರಿಲ್ 16) ಕೇರಳ ಪೊಲೀಸರ ವಿಶೇಷ ದಳ ಅವರಿರುವ ಹೋಟೇಲ್‌ ಮೇಲೆ ದಾಳಿ ನಡೆಸಿದೆ. ಕೊಚ್ಚಿಯಲ್ಲಿರುವ ಹೋಟೇಲ್‌ನಲ್ಲಿ ತಂಗಿದ್ದ ನಟ ಶೈನ್ ದಾಳಿಯ ಸಮಯದಲ್ಲಿ ಪರಾರಿಯಾದ ಘಟನೆ ಇದೀಗ ದೊಡ್ಡ ಸುದ್ದಿಯಾಗುತ್ತಿದೆ.

ಪೊಲೀಸರ ಪ್ರಾಥಮಿಕ ವರದಿಯಂತೆ, ಶೈನ್ ಟಾಮ್ ಚಾಕೊ ಅವರು ಇಬ್ಬರು ಸಹಚರರೊಂದಿಗೆ ಹೋಟೇಲ್‌ನ ಮೂರನೇ ಮಹಡಿಯಲ್ಲಿ ಇದ್ದಾಗ ದಾಳಿ ನಡೆದಿದೆ. ದಾಳಿಯನ್ನು ಗಮನಿಸಿದ ತಕ್ಷಣ, ನಟ ಮೂರನೇ ಮಹಡಿಯಿಂದ ಎರಡನೇ ಮಹಡಿಗೆ ಜಿಗಿದು, ನಂತರ ಈಜುಕೊಳವರೆಗೆ ಹಾರಿ, ರಿಸೆಪ್ಷನ್ ಭಾಗದ ಮೆಟ್ಟಿಲುಗಳ ಮೂಲಕ ಹೊರಗೆ ಓಡಿದ್ದಾಗಿ ತಿಳಿದುಬಂದಿದೆ.

ಪೊಲೀಸರು ತಕ್ಷಣವೇ ಶೋಧ ಕಾರ್ಯ ಆರಂಭಿಸಿದರೂ, ಶೈನ್ ತಲೆಮರೆಸಿಕೊಂಡಿದ್ದಾರೆ. ಅವರ ಹೋಟೇಲ್ ಕೋಣೆಯಲ್ಲಿ ಯಾವುದೇ ಮಾದಕವಸ್ತು ಪತ್ತೆಯಾಗಿಲ್ಲ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ. ಆದರೂ, ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ಅರಿಯಲು ಶೈನ್‌ ಅವರನ್ನು ವಶಕ್ಕೆ ತೆಗೆದುಕೊಳ್ಳುವ ಕ್ರಮ ಮುಂದುವರಿಸಲಾಗಿದೆ.

ಈ ಹಿಂದೆ, ಮಲಯಾಳಂ ನಟಿ ವಿನ್ಸಿ ಅಲೋಶಿಯಸ್ ಮಾಧ್ಯಮಗಳ ಮುಂದೆ “ಡ್ರಗ್ಸ್ ಸೇವಿಸುವ ನಟರೊಂದಿಗೆ ನಾನು ಚಲನಚಿತ್ರಗಳಲ್ಲಿ ಕೆಲಸ ಮಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದಲ್ಲದೇ, ಶೈನ್ ಟಾಮ್ ಚಾಕೊ ಅವರ ವಿರುದ್ಧ ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ಹಾಗೂ ಕೇರಳ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

ಶೈನ್ ಟಾಮ್ ಚಾಕೊ ಅವರು ‘ಉಂಡಾ’, ‘ತಲ್ಲುಮಾಲಾ’, ‘ಭೀಷ್ಮ ಪರ್ವಂ’ ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿರುವುದು ಬಹುಮಾನವಾದ ವಿಷಯ.

ಇದೀಗ ಈ ಪ್ರಕರಣ ಮಾಲಿವುಡ್‌ನಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಟನ ಬಂಧನದ ಬಗ್ಗೆ ಕಾದು ನೋಡಲಾಗುತ್ತಿದೆ.

nazeer ahamad

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

21 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

21 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

21 hours ago