Latest

ಡ್ರಗ್ಸ್ ಆರೋಪದ ಪ್ರಕರಣ: ನಟ ಶೈನ್ ಟಾಮ್ ಚಾಕೊ ಹೋಟೇಲ್‌ನಿಂದ ರಾತ್ರೋರಾತ್ರಿ ಪರಾರಿ..!

ಕೊಚ್ಚಿ: ಮಾಲಿವುಡ್‌ನ ಪಾಠಿ ಖ್ಯಾತ ನಟ ಶೈನ್ ಟಾಮ್ ಚಾಕೊ ವಿರುದ್ಧ ಮಾದಕವಸ್ತು ಸೇವನೆಯ ಆರೋಪ ಹೊತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ರಾತ್ರಿ (ಏಪ್ರಿಲ್ 16) ಕೇರಳ ಪೊಲೀಸರ ವಿಶೇಷ ದಳ ಅವರಿರುವ ಹೋಟೇಲ್‌ ಮೇಲೆ ದಾಳಿ ನಡೆಸಿದೆ. ಕೊಚ್ಚಿಯಲ್ಲಿರುವ ಹೋಟೇಲ್‌ನಲ್ಲಿ ತಂಗಿದ್ದ ನಟ ಶೈನ್ ದಾಳಿಯ ಸಮಯದಲ್ಲಿ ಪರಾರಿಯಾದ ಘಟನೆ ಇದೀಗ ದೊಡ್ಡ ಸುದ್ದಿಯಾಗುತ್ತಿದೆ.

ಪೊಲೀಸರ ಪ್ರಾಥಮಿಕ ವರದಿಯಂತೆ, ಶೈನ್ ಟಾಮ್ ಚಾಕೊ ಅವರು ಇಬ್ಬರು ಸಹಚರರೊಂದಿಗೆ ಹೋಟೇಲ್‌ನ ಮೂರನೇ ಮಹಡಿಯಲ್ಲಿ ಇದ್ದಾಗ ದಾಳಿ ನಡೆದಿದೆ. ದಾಳಿಯನ್ನು ಗಮನಿಸಿದ ತಕ್ಷಣ, ನಟ ಮೂರನೇ ಮಹಡಿಯಿಂದ ಎರಡನೇ ಮಹಡಿಗೆ ಜಿಗಿದು, ನಂತರ ಈಜುಕೊಳವರೆಗೆ ಹಾರಿ, ರಿಸೆಪ್ಷನ್ ಭಾಗದ ಮೆಟ್ಟಿಲುಗಳ ಮೂಲಕ ಹೊರಗೆ ಓಡಿದ್ದಾಗಿ ತಿಳಿದುಬಂದಿದೆ.

ಪೊಲೀಸರು ತಕ್ಷಣವೇ ಶೋಧ ಕಾರ್ಯ ಆರಂಭಿಸಿದರೂ, ಶೈನ್ ತಲೆಮರೆಸಿಕೊಂಡಿದ್ದಾರೆ. ಅವರ ಹೋಟೇಲ್ ಕೋಣೆಯಲ್ಲಿ ಯಾವುದೇ ಮಾದಕವಸ್ತು ಪತ್ತೆಯಾಗಿಲ್ಲ ಎಂಬುದನ್ನು ಪೊಲೀಸರು ದೃಢಪಡಿಸಿದ್ದಾರೆ. ಆದರೂ, ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ಅರಿಯಲು ಶೈನ್‌ ಅವರನ್ನು ವಶಕ್ಕೆ ತೆಗೆದುಕೊಳ್ಳುವ ಕ್ರಮ ಮುಂದುವರಿಸಲಾಗಿದೆ.

ಈ ಹಿಂದೆ, ಮಲಯಾಳಂ ನಟಿ ವಿನ್ಸಿ ಅಲೋಶಿಯಸ್ ಮಾಧ್ಯಮಗಳ ಮುಂದೆ “ಡ್ರಗ್ಸ್ ಸೇವಿಸುವ ನಟರೊಂದಿಗೆ ನಾನು ಚಲನಚಿತ್ರಗಳಲ್ಲಿ ಕೆಲಸ ಮಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು. ಅದಲ್ಲದೇ, ಶೈನ್ ಟಾಮ್ ಚಾಕೊ ಅವರ ವಿರುದ್ಧ ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ಹಾಗೂ ಕೇರಳ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

ಶೈನ್ ಟಾಮ್ ಚಾಕೊ ಅವರು ‘ಉಂಡಾ’, ‘ತಲ್ಲುಮಾಲಾ’, ‘ಭೀಷ್ಮ ಪರ್ವಂ’ ಸೇರಿದಂತೆ ಹಲವಾರು ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿರುವುದು ಬಹುಮಾನವಾದ ವಿಷಯ.

ಇದೀಗ ಈ ಪ್ರಕರಣ ಮಾಲಿವುಡ್‌ನಲ್ಲಿ ಹೊಸ ಸಂಚಲನ ಮೂಡಿಸಿದ್ದು, ನಟನ ಬಂಧನದ ಬಗ್ಗೆ ಕಾದು ನೋಡಲಾಗುತ್ತಿದೆ.

nazeer ahamad

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

4 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

4 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

10 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

10 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

10 hours ago