ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನಿಯಂತ್ರಣ ತಪ್ಪಿಸಿ ಪಾದಚಾರಿ ಮಾರ್ಗದ ಮೇಲೆ ಆಟೋ ಹರಿಸಿ, ನಂತರ ಪಲ್ಟಿ ಮಾಡಿದ್ದಾನೆ. ಈ ದುರ್ಘಟನೆಯಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಕಲಂದರ್ ಎಂಬಾತನು ಅಪಘಾತಕ್ಕೀಡಾದ ಚಾಲಕನೆಂದು ಗುರುತಿಸಲಾಗಿದೆ. ಮದ್ಯದ ನಶೆಯಲ್ಲಿ ಆಟೋ ಚಲಾಯಿಸುತ್ತಿದ್ದ ಈತನ ಆಟೋ ಹೊಯ್ಸಳ ಹೋಟೆಲ್ ಎದುರುಗಡೆ ಪ್ಲಾಟ್ಫಾರ್ಮ್ ಮೇಲೆ ಹತ್ತಿ ಬಿದ್ದಿದೆ. ಈ ವೇಳೆ ಆಟೋ ಪಲ್ಟಿಯಾದ ಪರಿಣಾಮ ಕಲಂದರ್ ತಲೆಗೆ ಭಾರಿ ಗಾಯವಾಗಿದೆ ಮತ್ತು ರಕ್ತಸ್ರಾವವೂ ಆಗಿದೆ.
ಘಟನೆ ಸಂಭವಿಸಿದ ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದರೂ, ಆತನ ಜೇಬಿನಿಂದ ಬಿದ್ದ ದೊಡ್ಡ ಚಾಕು ನೋಡಿ ಕೆಲ ಕಾಲ ಹಿಂಜರಿದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವರದಿ: ಶಿವು ಪಿ.ಆರ್.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಐ ಶ್ಕಾಂತರಾಜ್.ಕೆ ರವರು ಇದೇ ತಿಂಗಳ ಜೂನ್ 26 ರಂದು ಸಂಜೆ ಸಮಯ ಠಾಣೆಯಲ್ಲಿದ್ದಾಗ…
ಹೊನ್ನಾವರ: ಮಹಿಳೆಯರ ಗೌರವ ಮತ್ತು ಗೌಪ್ಯತೆ ಕಡೆಗಣಿಸುವ ಆತ್ಮಹೀನ ಕೃತ್ಯವೊಂದು ಹೊನ್ನಾವರದಲ್ಲಿ ಬೆಳಕಿಗೆ ಬಂದಿದೆ. ಸ್ನಾನ ಮಾಡುವ ಮಹಿಳೆಯನ್ನೇ ಇಣುಕಿ…
ಹುಬ್ಬಳ್ಳಿ, ಜೂನ್ 27 – ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದ ಸಂಯುಕ್ತ ತಪಾಸಣೆಯಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದೆ.…
ಬೆಂಗಳೂರು: ಕರ್ನಾಟಕ ಬಿಜೆಪಿ ಶಿಬಿರದಲ್ಲಿ ಆಂತರಿಕ ಬಿಕ್ಕಟ್ಟು ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದ್ದು, ನಾಯಕತ್ವದ ವಿರುದ್ ಸಮಾಧಾನ ದಿನದಿಂದ ದಿನಕ್ಕೆ…
ಮಂಗಳೂರು: ವಿವಾದಾತ್ಮಕ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರಮುಖ…
ಆಂಧ್ರಪ್ರದೇಶದಲ್ಲಿ ಪಶುಪ್ರೇಮಿಗಳಿಗೆ ಮತ್ತು ಗ್ರಾಮಸ್ಥರಲ್ಲಿ ಆಕ್ರೋಶ ಹುಟ್ಟಿಸುವಂತ ಘಟನೆ ನಡೆದಿದೆ. ಎಲೂರು ಜಿಲ್ಲೆಯ ಲಿಂಗಪಾಲಂ ಮಂಡಲದ ಮಾಥ ಗುಡೆಮ್ ಉಪನಗರದ…