ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನಿಯಂತ್ರಣ ತಪ್ಪಿಸಿ ಪಾದಚಾರಿ ಮಾರ್ಗದ ಮೇಲೆ ಆಟೋ ಹರಿಸಿ, ನಂತರ ಪಲ್ಟಿ ಮಾಡಿದ್ದಾನೆ. ಈ ದುರ್ಘಟನೆಯಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಕಲಂದರ್ ಎಂಬಾತನು ಅಪಘಾತಕ್ಕೀಡಾದ ಚಾಲಕನೆಂದು ಗುರುತಿಸಲಾಗಿದೆ. ಮದ್ಯದ ನಶೆಯಲ್ಲಿ ಆಟೋ ಚಲಾಯಿಸುತ್ತಿದ್ದ ಈತನ ಆಟೋ ಹೊಯ್ಸಳ ಹೋಟೆಲ್ ಎದುರುಗಡೆ ಪ್ಲಾಟ್ಫಾರ್ಮ್ ಮೇಲೆ ಹತ್ತಿ ಬಿದ್ದಿದೆ. ಈ ವೇಳೆ ಆಟೋ ಪಲ್ಟಿಯಾದ ಪರಿಣಾಮ ಕಲಂದರ್ ತಲೆಗೆ ಭಾರಿ ಗಾಯವಾಗಿದೆ ಮತ್ತು ರಕ್ತಸ್ರಾವವೂ ಆಗಿದೆ.
ಘಟನೆ ಸಂಭವಿಸಿದ ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದರೂ, ಆತನ ಜೇಬಿನಿಂದ ಬಿದ್ದ ದೊಡ್ಡ ಚಾಕು ನೋಡಿ ಕೆಲ ಕಾಲ ಹಿಂಜರಿದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವರದಿ: ಶಿವು ಪಿ.ಆರ್.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…