ಧಾರವಾಡ: ನಗರದ ಹಳೆ ಕೋರ್ಟ್ ವೃತ್ತದ ಬಳಿ ಆಘಾತಕಾರಿ ಘಟನೆ ಒಂದರಲ್ಲಿ, ಕಂಠಪೂರ್ತಿ ಮದ್ಯಪಾನ ಮಾಡಿಕೊಂಡು ಆಟೋ ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನಿಯಂತ್ರಣ ತಪ್ಪಿಸಿ ಪಾದಚಾರಿ ಮಾರ್ಗದ ಮೇಲೆ ಆಟೋ ಹರಿಸಿ, ನಂತರ ಪಲ್ಟಿ ಮಾಡಿದ್ದಾನೆ. ಈ ದುರ್ಘಟನೆಯಲ್ಲಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ಕಲಂದರ್ ಎಂಬಾತನು ಅಪಘಾತಕ್ಕೀಡಾದ ಚಾಲಕನೆಂದು ಗುರುತಿಸಲಾಗಿದೆ. ಮದ್ಯದ ನಶೆಯಲ್ಲಿ ಆಟೋ ಚಲಾಯಿಸುತ್ತಿದ್ದ ಈತನ ಆಟೋ ಹೊಯ್ಸಳ ಹೋಟೆಲ್ ಎದುರುಗಡೆ ಪ್ಲಾಟ್ಫಾರ್ಮ್ ಮೇಲೆ ಹತ್ತಿ ಬಿದ್ದಿದೆ. ಈ ವೇಳೆ ಆಟೋ ಪಲ್ಟಿಯಾದ ಪರಿಣಾಮ ಕಲಂದರ್ ತಲೆಗೆ ಭಾರಿ ಗಾಯವಾಗಿದೆ ಮತ್ತು ರಕ್ತಸ್ರಾವವೂ ಆಗಿದೆ.
ಘಟನೆ ಸಂಭವಿಸಿದ ತಕ್ಷಣ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿದರೂ, ಆತನ ಜೇಬಿನಿಂದ ಬಿದ್ದ ದೊಡ್ಡ ಚಾಕು ನೋಡಿ ಕೆಲ ಕಾಲ ಹಿಂಜರಿದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವರದಿ: ಶಿವು ಪಿ.ಆರ್.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…