ಕೋಲಾರ ಫೆ.2 : ಟೇಕಲ್ ರೈಲ್ವೆ ನಿಲ್ದಾಣದಲ್ಲಿ ರಾಕೇಶ್ ಎಂಬ ಕಾರು ಚಾಲಕ ಶನಿವಾರ ತಡರಾತ್ರಿ ಕಂಠಪೂರ್ತಿ ಕುಡಿದು ತನ್ನ ಮಾರುತಿ ಸ್ವಿಫ್ಟ್ ಡಿಸೈರ್ ಕಾರ್ (KA52-B-7105) ನಿಯಂತ್ರಣ ಕಳೆದುಕೊಂಡು ಕಾರನ್ನು ಟೇಕಲ್ ರೈಲ್ವೆ ಸ್ಟೇಷನ್ ಒಳಗೆ ನುಗ್ಗಿಸಿದ್ದಾನೆ. ರೈಲ್ವೆ ಸ್ಟೇಷನ್ ಒಳಗೆ ನುಗ್ಗಿದ ಕಾರು ನೇರವಾಗಿ ಪ್ಲಾಟ್ ಫಾರ್ಮ್ ಮೇಲಿಂದ ಚಲಿಸಿ ನಂತರ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಇದರ ಪರಿಣಾಮ ಕಾರು ಮತ್ತು ರೈಲ್ವೆ ಹಳಿಗಳಿಗೆ ಹಾನಿ ಉಂಟಾಗಿದ್ದು, ಆ ಸಮಯದಲ್ಲಿ ಯಾವುದೇ ರೈಲು ಬಾರದ ಕಾರಣ ಆಗಬಹುದಾದ ಭಾರಿ ಅನಾಹುತದಿಂದ ಪಾರದ ಘಟನೆ ನಡೆದಿದೆ.
ದಿಗಿಲುಗೊಂಡ ರೈಲ್ವೆ ಸಿಬ್ಬಂದಿಗಳ : ರೈಲ್ವೇ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಗಾಬರಿಗೊಂಡರು, ಅವರ ಸಮಯ ಪ್ರಜ್ಞೆಯಿಂದ ಕೂಡಲೇ ಎಚ್ಚೆತ್ತಿಕೊಂಡು ರೈಲ್ವೆ ಪೊಲೀಸರು ಮತ್ತು ಅಧಿಕಾರಿಗಳು ಜೆಸಿಬಿ ಸಹಾಯದಿಂದ ಕಾರನ್ನು ರೈಲ್ವೆ ಹಳಿಗಳಿಂದ ಹೊರತೆಗೆದಿದ್ದಾರೆ.
ಬೆಂಗಳೂರು-ಚೆನ್ನೈ ನಡುವೆ ಅನೇಕ ರೈಲುಗಳು ಟೇಕಲ್ ಮುಖಾಂತರವಾಗಿ ಸಂಚರಿಸುತ್ತಿದ್ದು ಘರೈಲ್ವೆಟನೆ ನಡೆದ ವೇಳೆ ರೈಲು ಬಂದಿದ್ದರೆ ದೊಡ್ಡ ಅನಾಹುತವೇ ಜರುಗುತ್ತಿತ್ತು, ಅದೃಷ್ಟವಶ ಘಟನೆ ನಡೆದ ಸಮಯದಲ್ಲಿ ಯಾವುದೇ ರೈಲು ಭಾರದಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ರಾಕೇಶ್ ಈ ಅವಾಂತರ ಸೃಷ್ಟಿಸಿದ್ದಾನೆ, ರೈಲ್ವೆ ಪೊಲೀಸರು ಕಾರು ಚಾಲಕ ರಾಕೇಶ್ನನ್ನು ವಶಕ್ಕೆ ಪಡೆದು ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಕಾರನ್ನು ವಶಕ್ಕೆ ಪಡೆದು ರಾಕೇಶ್ ನನ್ನು ಬಂಧಿಸಿದ್ದಾರೆ. ವರದಿ: ರೋಶನ್ ಜಮೀರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…