ಕೋಲಾರ ಫೆ.2 : ಟೇಕಲ್ ರೈಲ್ವೆ ನಿಲ್ದಾಣದಲ್ಲಿ ರಾಕೇಶ್ ಎಂಬ ಕಾರು ಚಾಲಕ ಶನಿವಾರ ತಡರಾತ್ರಿ ಕಂಠಪೂರ್ತಿ ಕುಡಿದು ತನ್ನ ಮಾರುತಿ ಸ್ವಿಫ್ಟ್ ಡಿಸೈರ್ ಕಾರ್ (KA52-B-7105) ನಿಯಂತ್ರಣ ಕಳೆದುಕೊಂಡು ಕಾರನ್ನು ಟೇಕಲ್ ರೈಲ್ವೆ ಸ್ಟೇಷನ್ ಒಳಗೆ ನುಗ್ಗಿಸಿದ್ದಾನೆ. ರೈಲ್ವೆ ಸ್ಟೇಷನ್ ಒಳಗೆ ನುಗ್ಗಿದ ಕಾರು ನೇರವಾಗಿ ಪ್ಲಾಟ್ ಫಾರ್ಮ್ ಮೇಲಿಂದ ಚಲಿಸಿ ನಂತರ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಇದರ ಪರಿಣಾಮ ಕಾರು ಮತ್ತು ರೈಲ್ವೆ ಹಳಿಗಳಿಗೆ ಹಾನಿ ಉಂಟಾಗಿದ್ದು, ಆ ಸಮಯದಲ್ಲಿ ಯಾವುದೇ ರೈಲು ಬಾರದ ಕಾರಣ ಆಗಬಹುದಾದ ಭಾರಿ ಅನಾಹುತದಿಂದ ಪಾರದ ಘಟನೆ ನಡೆದಿದೆ.
ದಿಗಿಲುಗೊಂಡ ರೈಲ್ವೆ ಸಿಬ್ಬಂದಿಗಳ : ರೈಲ್ವೇ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಗಾಬರಿಗೊಂಡರು, ಅವರ ಸಮಯ ಪ್ರಜ್ಞೆಯಿಂದ ಕೂಡಲೇ ಎಚ್ಚೆತ್ತಿಕೊಂಡು ರೈಲ್ವೆ ಪೊಲೀಸರು ಮತ್ತು ಅಧಿಕಾರಿಗಳು ಜೆಸಿಬಿ ಸಹಾಯದಿಂದ ಕಾರನ್ನು ರೈಲ್ವೆ ಹಳಿಗಳಿಂದ ಹೊರತೆಗೆದಿದ್ದಾರೆ.
ಬೆಂಗಳೂರು-ಚೆನ್ನೈ ನಡುವೆ ಅನೇಕ ರೈಲುಗಳು ಟೇಕಲ್ ಮುಖಾಂತರವಾಗಿ ಸಂಚರಿಸುತ್ತಿದ್ದು ಘರೈಲ್ವೆಟನೆ ನಡೆದ ವೇಳೆ ರೈಲು ಬಂದಿದ್ದರೆ ದೊಡ್ಡ ಅನಾಹುತವೇ ಜರುಗುತ್ತಿತ್ತು, ಅದೃಷ್ಟವಶ ಘಟನೆ ನಡೆದ ಸಮಯದಲ್ಲಿ ಯಾವುದೇ ರೈಲು ಭಾರದಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ರಾಕೇಶ್ ಈ ಅವಾಂತರ ಸೃಷ್ಟಿಸಿದ್ದಾನೆ, ರೈಲ್ವೆ ಪೊಲೀಸರು ಕಾರು ಚಾಲಕ ರಾಕೇಶ್ನನ್ನು ವಶಕ್ಕೆ ಪಡೆದು ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಕಾರನ್ನು ವಶಕ್ಕೆ ಪಡೆದು ರಾಕೇಶ್ ನನ್ನು ಬಂಧಿಸಿದ್ದಾರೆ. ವರದಿ: ರೋಶನ್ ಜಮೀರ್
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…