Latest

ಕುಡಿದು ನಿಯಂತ್ರಣ ತಪ್ಪಿದ ಕಾರು ಚಾಲಕ: ರೈಲ್ವೆ ಪ್ಲಾಟ್‌ಫಾರ್ಮ್ ದಾಟಿ ಹಳಿಗಳ ಮೇಲೆ ಉರುಳಿತು ಕಾರು!

ಕೋಲಾರ ಫೆ.2 : ಟೇಕಲ್ ರೈಲ್ವೆ ನಿಲ್ದಾಣದಲ್ಲಿ ರಾಕೇಶ್ ಎಂಬ ಕಾರು ಚಾಲಕ ಶನಿವಾರ ತಡರಾತ್ರಿ ಕಂಠಪೂರ್ತಿ ಕುಡಿದು ತನ್ನ ಮಾರುತಿ ಸ್ವಿಫ್ಟ್ ಡಿಸೈರ್ ಕಾರ್ (KA52-B-7105) ನಿಯಂತ್ರಣ ಕಳೆದುಕೊಂಡು ಕಾರನ್ನು ಟೇಕಲ್ ರೈಲ್ವೆ ಸ್ಟೇಷನ್ ಒಳಗೆ ನುಗ್ಗಿಸಿದ್ದಾನೆ. ರೈಲ್ವೆ ಸ್ಟೇಷನ್ ಒಳಗೆ ನುಗ್ಗಿದ ಕಾರು ನೇರವಾಗಿ ಪ್ಲಾಟ್ ಫಾರ್ಮ್ ಮೇಲಿಂದ ಚಲಿಸಿ ನಂತರ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಇದರ ಪರಿಣಾಮ ಕಾರು ಮತ್ತು ರೈಲ್ವೆ ಹಳಿಗಳಿಗೆ ಹಾನಿ ಉಂಟಾಗಿದ್ದು, ಆ ಸಮಯದಲ್ಲಿ ಯಾವುದೇ ರೈಲು ಬಾರದ ಕಾರಣ ಆಗಬಹುದಾದ ಭಾರಿ ಅನಾಹುತದಿಂದ ಪಾರದ ಘಟನೆ ನಡೆದಿದೆ.

ದಿಗಿಲುಗೊಂಡ ರೈಲ್ವೆ ಸಿಬ್ಬಂದಿಗಳ : ರೈಲ್ವೇ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಗಾಬರಿಗೊಂಡರು, ಅವರ ಸಮಯ ಪ್ರಜ್ಞೆಯಿಂದ ಕೂಡಲೇ ಎಚ್ಚೆತ್ತಿಕೊಂಡು ರೈಲ್ವೆ ಪೊಲೀಸರು ಮತ್ತು ಅಧಿಕಾರಿಗಳು ಜೆಸಿಬಿ ಸಹಾಯದಿಂದ ಕಾರನ್ನು ರೈಲ್ವೆ ಹಳಿಗಳಿಂದ ಹೊರತೆಗೆದಿದ್ದಾರೆ.

ಬೆಂಗಳೂರು-ಚೆನ್ನೈ ನಡುವೆ ಅನೇಕ ರೈಲುಗಳು ಟೇಕಲ್ ಮುಖಾಂತರವಾಗಿ ಸಂಚರಿಸುತ್ತಿದ್ದು ಘರೈಲ್ವೆಟನೆ ನಡೆದ ವೇಳೆ ರೈಲು ಬಂದಿದ್ದರೆ ದೊಡ್ಡ ಅನಾಹುತವೇ ಜರುಗುತ್ತಿತ್ತು, ಅದೃಷ್ಟವಶ ಘಟನೆ ನಡೆದ ಸಮಯದಲ್ಲಿ ಯಾವುದೇ ರೈಲು ಭಾರದಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

ಕಂಠಪೂರ್ತಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ರಾಕೇಶ್ ಈ ಅವಾಂತರ ಸೃಷ್ಟಿಸಿದ್ದಾನೆ, ರೈಲ್ವೆ ಪೊಲೀಸರು ಕಾರು ಚಾಲಕ ರಾಕೇಶ್‌ನನ್ನು ವಶಕ್ಕೆ ಪಡೆದು ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಕಾರನ್ನು ವಶಕ್ಕೆ ಪಡೆದು ರಾಕೇಶ್ ನನ್ನು ಬಂಧಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago