ನಂಜನಗೂಡು:ಮೈಸೂರು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766 ರ ಡೇಂಜರ್ ಜೋನ್ ಎಂದೇ ಹೇಳುವ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಕಾರು ಚಾಲಕ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಪರಿಣಾಮ ಚಲಿಸುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ದ್ವಿಚಕ್ರವಾಹನದ ಮೂವರು ಮಂದಿ ಸ್ಥಳದಲ್ಲಿಯೇ ಸಾವನಪ್ಪಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಮಂಗಳವಾರ ರಾತ್ರಿ ನಡೆದಿದೆ .ನಂಜನಗೂಡು ತಾಲೂಕಿನ ಕೂಡ್ಲಾ ಪುರ ಗ್ರಾಮದ ಶಶಿಧರ(23) ಪತ್ನಿ ಶಾಲಿನಿ( 20) ಹಾಗೂ ಶಶಿಧರನ ತಾಯಿ ಭಾಗ್ಯಮ್ಮ( 40) ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳು ಹಾಗೂ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ .
ಘಟನೆಯ ವಿವರ
ನಂಜನಗೂಡು ತಾಲೂಕು ಕೂಡ್ಲಾಪುರ ಗ್ರಾಮದ ಮೃತ ಮಹಿಳೆ ಭಾಗ್ಯಮ್ಮ ಎಂಬುವರ ಮಗ ಶಶಿಧರ ಮತ್ತು ಸೊಸೆ ಶಾಲಿನಿ ಜೊತೆ ಮದುವೆಯಾಗಿ ಒಂದು ವರ್ಷ ಕಳೆದರೂ ಮಕ್ಕಳಾಗದ ಕಾರಣ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ವರ ಪಡೆಯುವ ಸಲುವಾಗಿ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಎರಡು ದ್ವಿಚಕ್ರ ವಾಹನದಲ್ಲಿ ನಾಲ್ಕು ಮಂದಿ ತೆರಳಿದ್ದರು. ದೇವರ ದರ್ಶನ ಪಡೆದು ಮತ್ತೆ ಗ್ರಾಮದತ್ತ ಬರುವಾಗ ಬೇಗೂರು ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಹಿರಿಕಾಟಿ ಗ್ರಾಮದ ಗೇಟ್ ಬಳಿ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ KA 10 M 5127 ನಂಬರ್ ಪ್ಲೇಟ್ ಹೊಂದಿರುವ ಕಾರೊಂದು ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರವಾಹನದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಓರ್ವನ ಸ್ಥಿತಿ ಗಂಭೀರವಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ತುರ್ತು ಘಟಕ ಚಿಕಿತ್ಸೆಗೆ ರವಾನಿಸಲಾಗಿದೆ.
ಮೂವರನ್ನು ಬಲಿ ಪಡೆದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಬೇಗೂರು ಪೊಲೀಸರು ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಚಾಲಕನ ಶೋಧನೆಗೆ ಮುಂದಾಗಿದ್ದಾರೆ. ವರದಿ: ಮೋಹನ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…