ಗದಗ ಜಿಲ್ಲೆಯ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಐಪಿಎಸ್ ಅಧಿಕಾರಿ ಅನಿತಾ ಹದ್ದಣ್ಣವರ್ ಅವರ ಸಹೋದರ ಅಕ್ಷತ್ ಹದ್ದಣ್ಣವರ್ ಕಡೆಯಿಂದ ನಡೆದ ಅಹಿತಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಡಿತದ ಮತ್ತಿನಲ್ಲಿ ಠಾಣೆಗೆ ನುಗ್ಗಿದ ಅಕ್ಷತ್, ಪೊಲೀಸ್ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿದ್ದಾರೆ.
ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ವಾಸಿಸುತ್ತಿರುವ ಅಕ್ಷತ್ ಹದ್ದಣ್ಣವರ್ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ತಮ್ಮ ಸಹಚರನೊಂದಿಗೆ ಕಾರಿನಲ್ಲಿ ಠಾಣೆಗೆ ನುಗ್ಗಿ, ವಾಹನ ನಿಲ್ಲಿಸುವ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಪಾರ್ಕಿಂಗ್ ಜಾಗವನ್ನು ಆಕ್ರಮಿಸಿದ್ದಾರೆ. ಇದರಿಂದ ಸ್ಥಳೀಯ ಪೊಲೀಸರೊಂದಿಗೆ ಮಾತಿನ ಚಕಮಕಿ ಉಂಟಾಗಿದೆ. “ನಾನು ವಕೀಲ, ಯಾರೂ ಏನೂ ಮಾಡಲಾಗದು” ಎಂದು ಬೆದರಿಕೆ ಹಾಕಿದ್ದಾನೆ ಎಂಬ ದೂರಿದೆ.
ಘಟನೆಯ ಸಮಯದಲ್ಲಿ ಅಕ್ಷತ್ ರೌಡಿ ಶೈಲಿಯಲ್ಲಿ ವರ್ತನೆ ತೋರಿದ್ದು, ಠಾಣೆ ಹೊರಗೆ ಕೂಡ ಸ್ಥಳೀಯರೊಂದಿಗೆ ವಾಗ್ವಾದ ನಡೆಸಿದ್ದಾನೆ. ಈ ನಡೆಗೆ ಜನಸಾಮಾನ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಸಾಮಾನ್ಯ ವ್ಯಕ್ತಿ ಹೀಗೆ ಮಾಡಿದರೆ ಕಾನೂನು ಕಟ್ಟುನಿಟ್ಟಾಗಿ ಜಾರಿಯಾಗುತ್ತಿತ್ತು, ಆದರೆ ಅಧಿಕಾರಿ ಸಹೋದರನಿಗೆ ಮಾತ್ರ ಸಡಿಲತೆ ತೋರಿಸಲಾಗಿದೆ” ಎಂದು ಆರೋಪಿಸಿದ್ದಾರೆ.
ಘಟನೆಯ ನಂತರ ಕೇವಲ ಡ್ರಿಂಕ್ ಅಂಡ್ ಡ್ರೈವ್ ಪರೀಕ್ಷೆ ನಡೆಸಿ ಬಿಡುಗಡೆ ಮಾಡಿದರೆಂಬ ವಿಷಯವೂ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. “ಕಾನೂನು ಎಲ್ಲರಿಗೂ ಸಮಾನವೇ ಅಥವಾ ಅಧಿಕಾರಿಗಳ ಬಂಧುಗಳಿಗೆ ಬೇರೆ ನಿಯಮವೇ?” ಎಂಬ ಪ್ರಶ್ನೆ ಜನಮನದಲ್ಲಿ ಮೂಡಿದೆ.
ಈ ಸಂಬಂಧ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಪ್ರತಿಕ್ರಿಯೆ ನೀಡಿದ್ದು, “ಘಟನೆ ಕುರಿತು 186 (ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು), 504 (ಪ್ರಚೋದನಕಾರಿ ನಿಂದನೆ) ಹಾಗೂ 506 (ಬೆದರಿಕೆ) ಕಲಂಗಳು ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಪ್ರಾರಂಭಿಸಲಾಗಿದೆ” ಎಂದಿದ್ದಾರೆ.
ಈ ಘಟನೆ ಅಧಿಕಾರಿಗಳ ಬಂಧುಗಳಿಗೆ ಕಾನೂನು ಹೇಗೆ ಜಾರಿಯಾಗುತ್ತದೆ ಎಂಬ ಚರ್ಚೆಗೆ ತೀವ್ರ ತಾಣ ಒದಗಿಸಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…