ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ.
ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಫೇಕ್ ಸರ್ಟಿಫಿಕೇಟ್ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೋಲೀಸರು ಸೈಬರ್ ಸೆಂಟರ್ಗೆ ಬೀಗ ಜಡಿದಿದ್ದಾರೆ. ಈತ ನಕುಲ್ ನೆಟ್ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…