ಬಂಗಾರಪೇಟೆ: ದಿನಾಂಕ:17.02.2025 ರಂದು ಮದ್ಯಾಹ್ನ 2.30 ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಪಿ.ಎಸ್.ಐ. ರಾಜಣ್ಣ ಮತ್ತು ಅಪರಾಧ ಪತ್ತೆ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ನಾಗೇಶ್.ಎಂ ಹೆಚ್, ವೆಂಕಟೇಶ್, ಚಲಪತಿ ರವರೊಂದಿಗೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಐ.ಎಂ.ವಿ ಕೇಸುಗಳನ್ನು ದಾಖಲಿಸುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಒಂದು ಟಿ.ವಿ.ಎಸ್ ವಿಕ್ಟರ್ ದ್ವಿಚಕ್ರ ವಾಹನದಲ್ಲಿ ಬಂದಾಗ ಸಿಬ್ಬಂದಿಯವರು ಅವರನ್ನು ತಡೆದು ನಿಲ್ಲಿಸಿ ಹೆಸರು ವಿಳಾಸ ವಿಚಾರಿಸಿದಾಗ ಮುಕ್ತಿಯಾರ್ ಪಾಷ, ಸಿ ರಹೀಂ ಕಾಂಪೌಂಡ್ ಬಂಗಾರಪೇಟೆ, ಇಮ್ರಾನ್, ಕಾರಹಳ್ಳಿ ಬಂಗಾರಪೇಟೆ ನಿವಾಸಿಗಳೆಂದು ತಿಳಿಸಿದ್ದಾರೆ. ಅವರ ಬಳಿ ಇದ್ದ ದ್ವಿಚಕ್ರ ವಾಹನ ಸಂಖ್ಯೆ ಕೆ.ಎ 08 ಜೆ 2317 ವಾಹನದ ದಾಖಲಾತಿಗಳನ್ನು ಕೇಳಲಾಗಿ ಯಾವುದೇ ದಾಖಲಾತಿಗಳನ್ನು ತೋರಿಸಿದ ಕಾರಣ. ಈ ಇಬ್ಬರು ಆಸಾಮಿಗಳು ವಾಹನವನ್ನು ಕಳವು ಮಾಡಿರಬಹುದು ಎಂಬ ಅನುಮಾನದ ಮೇರೆಗೆ ಪಿ.ಐ ದಯಾನಂದ್ ರವರ ಸೂಚನೆ ಮೇರೆಗೆ ಈ ಇಬ್ಬರ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊ.ಸಂ. 43/2025 ಕಲಂ 35(1)(ಇ)106 ಬಿ.ಎನ್.ಎಸ್.ಎಸ್ ರಜೋ 303(2) ಬಿ.ಎನ್.ಎಸ್ ರೀತ್ಯ ಕೇಸು ದಾಖಲಿಸಿ, ಪ್ರಕಾಶ್ ನರಸಿಂಗ್ ಪಿ.ಎಸ್.ಐ , ಪಾಂಡುರಂಗ ಡಿ.ವೈ.ಎಸ್.ಪಿ ರವರ ಮಾರ್ಗದರ್ಶನದಂತೆ ತನಿಖೆ ಕೈಗೊಂಡು ಬಂಗಾರಪೇಟೆಯ ವಿವಿಧ ಕಡೆ ಕಳವು ಮಾಡಿದ್ದ 2,50,000/-ರೂ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳನ್ನು ಆರೋಪಿತರ ಕಡೆಯಿಂದ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ,
ಬಂಗಾರಪೇಟೆ ಪೊಲೀಸರ ಈ ಕಾರ್ಯಾಚರಣೆಯನ್ನು ಮೆಚ್ಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಎಂ. ಶಾಂತರಾಜು ಐ.ಪಿ.ಎಸ್ ಅಭಿನಂದಿಸಿದ್ದಾರೆ. ವರದಿ: ರೋಶನ್ ಜಮೀರ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…