ಬಂಗಾರಪೇಟೆ: ದಿನಾಂಕ:17.02.2025 ರಂದು ಮದ್ಯಾಹ್ನ 2.30 ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಪಿ.ಎಸ್.ಐ. ರಾಜಣ್ಣ ಮತ್ತು ಅಪರಾಧ ಪತ್ತೆ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ನಾಗೇಶ್.ಎಂ ಹೆಚ್, ವೆಂಕಟೇಶ್, ಚಲಪತಿ ರವರೊಂದಿಗೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಐ.ಎಂ.ವಿ ಕೇಸುಗಳನ್ನು ದಾಖಲಿಸುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಒಂದು ಟಿ.ವಿ.ಎಸ್ ವಿಕ್ಟರ್ ದ್ವಿಚಕ್ರ ವಾಹನದಲ್ಲಿ ಬಂದಾಗ ಸಿಬ್ಬಂದಿಯವರು ಅವರನ್ನು ತಡೆದು ನಿಲ್ಲಿಸಿ ಹೆಸರು ವಿಳಾಸ ವಿಚಾರಿಸಿದಾಗ ಮುಕ್ತಿಯಾರ್ ಪಾಷ, ಸಿ ರಹೀಂ ಕಾಂಪೌಂಡ್ ಬಂಗಾರಪೇಟೆ, ಇಮ್ರಾನ್, ಕಾರಹಳ್ಳಿ ಬಂಗಾರಪೇಟೆ ನಿವಾಸಿಗಳೆಂದು ತಿಳಿಸಿದ್ದಾರೆ. ಅವರ ಬಳಿ ಇದ್ದ ದ್ವಿಚಕ್ರ ವಾಹನ ಸಂಖ್ಯೆ ಕೆ.ಎ 08 ಜೆ 2317 ವಾಹನದ ದಾಖಲಾತಿಗಳನ್ನು ಕೇಳಲಾಗಿ ಯಾವುದೇ ದಾಖಲಾತಿಗಳನ್ನು ತೋರಿಸಿದ ಕಾರಣ. ಈ ಇಬ್ಬರು ಆಸಾಮಿಗಳು ವಾಹನವನ್ನು ಕಳವು ಮಾಡಿರಬಹುದು ಎಂಬ ಅನುಮಾನದ ಮೇರೆಗೆ ಪಿ.ಐ ದಯಾನಂದ್ ರವರ ಸೂಚನೆ ಮೇರೆಗೆ ಈ ಇಬ್ಬರ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊ.ಸಂ. 43/2025 ಕಲಂ 35(1)(ಇ)106 ಬಿ.ಎನ್.ಎಸ್.ಎಸ್ ರಜೋ 303(2) ಬಿ.ಎನ್.ಎಸ್ ರೀತ್ಯ ಕೇಸು ದಾಖಲಿಸಿ, ಪ್ರಕಾಶ್ ನರಸಿಂಗ್ ಪಿ.ಎಸ್.ಐ , ಪಾಂಡುರಂಗ ಡಿ.ವೈ.ಎಸ್.ಪಿ ರವರ ಮಾರ್ಗದರ್ಶನದಂತೆ ತನಿಖೆ ಕೈಗೊಂಡು ಬಂಗಾರಪೇಟೆಯ ವಿವಿಧ ಕಡೆ ಕಳವು ಮಾಡಿದ್ದ 2,50,000/-ರೂ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳನ್ನು ಆರೋಪಿತರ ಕಡೆಯಿಂದ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ,
ಬಂಗಾರಪೇಟೆ ಪೊಲೀಸರ ಈ ಕಾರ್ಯಾಚರಣೆಯನ್ನು ಮೆಚ್ಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಎಂ. ಶಾಂತರಾಜು ಐ.ಪಿ.ಎಸ್ ಅಭಿನಂದಿಸಿದ್ದಾರೆ. ವರದಿ: ರೋಶನ್ ಜಮೀರ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…