Latest

ಬಂಗಾರಪೇಟೆ ಪೊಲೀಸರ ತನಿಖೆ ವೇಳೆ 2,50,000/- ಬೆಲೆ ಬಾಳುವ 4 ದ್ವಿಚಕ್ರ ವಾಹನ ವಶಕ್ಕೆ ಇಬ್ಬರು ಆರೋಪಿಗಳ ಬಂಧನ.

ಬಂಗಾರಪೇಟೆ: ದಿನಾಂಕ:17.02.2025 ರಂದು ಮದ್ಯಾಹ್ನ 2.30 ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆ ಪಿ.ಎಸ್.ಐ. ರಾಜಣ್ಣ ಮತ್ತು ಅಪರಾಧ ಪತ್ತೆ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ನಾಗೇಶ್.ಎಂ ಹೆಚ್‌, ವೆಂಕಟೇಶ್, ಚಲಪತಿ ರವರೊಂದಿಗೆ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ಐ.ಎಂ.ವಿ ಕೇಸುಗಳನ್ನು ದಾಖಲಿಸುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ಒಂದು ಟಿ.ವಿ.ಎಸ್ ವಿಕ್ಟರ್ ದ್ವಿಚಕ್ರ ವಾಹನದಲ್ಲಿ ಬಂದಾಗ ಸಿಬ್ಬಂದಿಯವರು ಅವರನ್ನು ತಡೆದು ನಿಲ್ಲಿಸಿ ಹೆಸರು ವಿಳಾಸ ವಿಚಾರಿಸಿದಾಗ ಮುಕ್ತಿಯಾರ್ ಪಾಷ, ಸಿ ರಹೀಂ ಕಾಂಪೌಂಡ್ ಬಂಗಾರಪೇಟೆ, ಇಮ್ರಾನ್, ಕಾರಹಳ್ಳಿ ಬಂಗಾರಪೇಟೆ ನಿವಾಸಿಗಳೆಂದು ತಿಳಿಸಿದ್ದಾರೆ. ಅವರ ಬಳಿ ಇದ್ದ ದ್ವಿಚಕ್ರ ವಾಹನ ಸಂಖ್ಯೆ ಕೆ.ಎ 08 ಜೆ 2317 ವಾಹನದ ದಾಖಲಾತಿಗಳನ್ನು ಕೇಳಲಾಗಿ ಯಾವುದೇ ದಾಖಲಾತಿಗಳನ್ನು ತೋರಿಸಿದ ಕಾರಣ. ಈ ಇಬ್ಬರು ಆಸಾಮಿಗಳು ವಾಹನವನ್ನು ಕಳವು ಮಾಡಿರಬಹುದು ಎಂಬ ಅನುಮಾನದ ಮೇರೆಗೆ ಪಿ.ಐ ದಯಾನಂದ್ ರವರ ಸೂಚನೆ ಮೇರೆಗೆ ಈ ಇಬ್ಬರ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊ.ಸಂ. 43/2025 ಕಲಂ 35(1)(ಇ)106 ಬಿ.ಎನ್.ಎಸ್.ಎಸ್ ರಜೋ 303(2) ಬಿ.ಎನ್.ಎಸ್ ರೀತ್ಯ ಕೇಸು ದಾಖಲಿಸಿ, ಪ್ರಕಾಶ್ ನರಸಿಂಗ್ ಪಿ.ಎಸ್.ಐ , ಪಾಂಡುರಂಗ ಡಿ.ವೈ.ಎಸ್.ಪಿ ರವರ ಮಾರ್ಗದರ್ಶನದಂತೆ ತನಿಖೆ ಕೈಗೊಂಡು ಬಂಗಾರಪೇಟೆಯ ವಿವಿಧ ಕಡೆ ಕಳವು ಮಾಡಿದ್ದ 2,50,000/-ರೂ ಬೆಲೆ ಬಾಳುವ 4 ದ್ವಿಚಕ್ರ ವಾಹನಗಳನ್ನು ಆರೋಪಿತರ ಕಡೆಯಿಂದ ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ,

ಬಂಗಾರಪೇಟೆ ಪೊಲೀಸರ ಈ ಕಾರ್ಯಾಚರಣೆಯನ್ನು ಮೆಚ್ಚಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಎಂ. ಶಾಂತರಾಜು ಐ.ಪಿ.ಎಸ್ ಅಭಿನಂದಿಸಿದ್ದಾರೆ. ವರದಿ: ರೋಶನ್ ಜಮೀರ್

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

57 minutes ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

57 minutes ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

58 minutes ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

60 minutes ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

16 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

16 hours ago