ಪ್ರಾಂಶುಪಾಲ ಅತ್ಯಾಚಾರ ಎಸಗಿದ ಆರೋಪ ಉತ್ತರಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ.
ಪ್ರಾಂಶುಪಾಲರು ನವೆಂಬರ್ 23 ರಂದು ಶಾಲೆಯ ಒಂಬತ್ತು ವಿದ್ಯಾರ್ಥಿನಿಯರನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು ಮತ್ತು ವಿದ್ಯಾರ್ಥಿನಿಯರಿಗೆ ವಸತಿಗಾಗಿ ಹೋಟೆಲ್ನಲ್ಲಿ ಎರಡು ಕೊಠಡಿಗಳನ್ನು ತೆಗೆದುಕೊಂಡಿದ್ದರು. ಒಂದು ಕೊಠಡಿಯಲ್ಲಿ ಎಂಟು ವಿದ್ಯಾರ್ಥಿನಿಯರು ಉಳಿದುಕೊಂಡಿದ್ದರೆ, ಇನ್ನೊಂದು ಕೊಠಡಿಯಲ್ಲಿ ಪ್ರಾಂಶುಪಾಲರು 11ನೇ ತರಗತಿ ವಿದ್ಯಾರ್ಥಿನಿ -17 ವರ್ಷದ ಬಾಲಕಿಯೊಂದಿಗೆ ಉಳಿದುಕೊಂಡಿದ್ದರು ಎನ್ನಲಾಗಿದೆ.
ಪ್ರಾಂಶುಪಾಲರು ವಿದ್ಯಾರ್ಥಿನಿಯ ಆಹಾರದಲ್ಲಿ ಮಾದಕ ವಸ್ತುವನ್ನು ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿದಾಗ, ಪರೀಕ್ಷೆಯಲ್ಲಿ ಅನುತ್ತೀರ್ಣ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಮತ್ತು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರವಾಸದಿಂದ ವಿದ್ಯಾರ್ಥಿಗಳು ನವೆಂಬರ್ 24 ರಂದು ತಮ್ಮ ಮನೆಗೆ ಮರಳಿದ್ದರು. ಆರಂಭದಲ್ಲಿ ಬಾಲಕಿ ಘಟನೆಯ ಬಗ್ಗೆ ಮೌನವಾಗಿದ್ದಳು ಆದರೆ ನಂತರ ಘಟನೆಗಳ ಕುರಿತು ಸಂಪೂರ್ಣವಾಗಿ ತನ್ನ ಕುಟುಂಬ ಸದಸ್ಯರಿಗೆ ವಿವರಿಸಿದಳು ಎಂದು ಅವರು ಹೇಳಿದರು. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು ನಾಪತ್ತೆಯಾಗಿರುವ ಪ್ರಾಂಶುಪಾಲರನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ.
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…