ಕಳೆದ ಕೆಲವು ತಿಂಗಳಿಂದ ಬಹುಮಟ್ಟಿಗೆ ಗಮನಸೆಳೆದಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಇದೀಗ (ಇಡಿ) ಹೊಸ ತಿರುವು ನೀಡಿದ್ದು, ಇಂದು ಅವರ ಮನೆಗಳಿಗೆ ದಾಳಿ ನಡೆಸಲಾಗಿದೆ. ತಮ್ಮನ್ನು ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಪರಿಚಯಿಸಿ ಮೋಸ ಎಸಗಿದ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ಇದೀಗ ಇಡಿಯ ನಿಗಾ ಸೆಳೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯಾ ಮನೆ ಹಾಗೂ ಬೆಂಗಳೂರಿನ ನಿವಾಸಗಳ ಮೇಲೆ ಈ ದಾಳಿ ನಡೆದಿದೆ. ಇಡಿ ಅಧಿಕಾರಿಗಳು ದಾಖಲೆಗಳು, ಹಣಕಾಸು ವ್ಯವಹಾರಗಳು ಹಾಗೂ ಇತರ ಮಹತ್ವದ ವಿವರಗಳ ಪರಿಶೀಲನೆ ನಡೆಸಿದ್ದಾರೆ.
ಈ ನಡುವೆಯೇ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರ ಮನೆ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆದಿದೆ. ಈ ದಾಳಿಗೆ ಯಾವ ಪ್ರಕರಣದ ಸಂಪರ್ಕವಿದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಐಶ್ವರ್ಯಾ ಗೌಡ ವಿರುದ್ಧ ವನಿತಾ ಎಸ್. ಐತಾಳ್ ಎಂಬ ಚಿನ್ನದ ಅಂಗಡಿ ಮಾಲಕಿ ನೀಡಿರುವ ದೂರಿನ ಪ್ರಕಾರ, ಸುಮಾರು 9.82 ಕೋಟಿ ರೂ. ಮೌಲ್ಯದ 14 ಕೆಜಿ 660 ಗ್ರಾಂ ಚಿನ್ನವನ್ನು ವಂಚನೆ ಮೂಲಕ ಕಬಳಿಸಲಾಗಿದೆ. ಐಶ್ವರ್ಯಾ ಗೌಡ ಅವರು ರಾಜಕೀಯ ಸಂಬಂಧಗಳನ್ನು ನಂಬಿಸಿ ಚಿನ್ನ ಪಡೆದಿದ್ದಾರೆ ಎಂಬ ಗಂಭೀರ ಆರೋಪ ದಾಖಲಾಗಿದೆ. ಈ ಬಗ್ಗೆ ಸಾಕ್ಷ್ಯವಾಗಿ ಆಡಿಯೋ ಕ್ಲಿಪಿಂಗ್ ಹಾಗೂ ಇತರ ದಾಖಲೆಗಳು ಪೊಲೀಸರು ಬಳಿ ದಾಖಲಾಗಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಕ್ರಿಯ ತನಿಖೆ ಮುಂದುವರೆಸಿದ್ದು, ಮತ್ತಷ್ಟು ರಾಜಕೀಯ ಮುಖಂಡರು ಕೂಡಾ ಇಡಿಯ ತಪಾಸಣೆಯ ದಾರಿಯಲ್ಲಿದ್ದಾರೆ ಎಂಬ ಅಂದಾಜುಗಳು ಹರಡುತ್ತಿದ್ದವೆಯೆಂದು ಮೂಲಗಳು ತಿಳಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…