ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗೇರ್ ಉದ್ಘಾಟಿಸಿದ್ದಾರೆ.
ಇದೇನ್ರೀ ಅವರು ಉದ್ಘಾಟನೆ ಮಾಡಿದರೆ ಏನಾಯ್ತು ಅವರು ಮನುಷ್ಯರೇ ಅಲ್ವಾ ಅನ್ನೋ ಪ್ರಶ್ನೆ ಯಾರಿಗಾದರೂ ಕಾಡುತ್ತೆ.. ಮಾಡ್ಬಾರ್ದು ಯಾಕಂದ್ರೆ ಅವರೊಬ್ಬ ಸರ್ಕಾರಿ ಅಧಿಕಾರಿ ಹಾಗಾಗಿ. ಅತ್ತ ಸರ್ಕಾರ ಈ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ತಯಾರಾಗಿದ್ದರೆ ಇತ್ತ ಈ ಅಧಿಕಾರಿ ಅದೇ ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟನೆ ಮಾಡಿದ್ದಾರೆ ಹಾಗಾದರೆ ಈ ಸರ್ಕಾರಿ ಅಧಿಕಾರಿಗೆ ತನ್ನ ಕರ್ತವ್ಯವೇನು ಎನ್ನುವ ಕನಿಷ್ಠ ಜ್ಞಾನ ಇಲ್ಲವಾ ಎಂದು ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಮಾತನಾಡುತ್ತಿದ್ದಾರೆ.
ಈ ಹಿಂದೆ ದಲಿತ ಶಿಕ್ಷಕರ ಮೇಲೆ ಕೈ ಮಾಡಿದ್ದು ಇದೆ ಅಧಿಕಾರಿ :-ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿರುವ ಡಾ. ಅಂಬಿಗೇರ್ ಅವರು ಹುನಗುಂದ ಪ್ರೌಢಶಾಲೆಯಲ್ಲಿ ಒರ್ವ ದಲಿತ ಶಿಕ್ಷಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಇರುತ್ತದೆ. ಹಾಗಾಗಿ ಇವರ ತಂಟೆಗೆ ಯಾರು ಹೋಗಲ್ವೇನೊ ಅನಿಸುತ್ತೆ.
ಶಿಕ್ಷಣಾಧಿಕಾರಿ ಹೇಳೋದೇನು..? ಈ ಬಗ್ಗೆ ಮುಂಡಗೋಡದ ಶಿಕ್ಷಣಾಧಿಕಾರಿಗೆ ಕೇಳಿದಾಗ ವಿಷಯ ಗಮನಕ್ಕೆ ಬಂದಿದ್ದು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
CWSN ಮಕ್ಕಳ ಅನುದಾನ ದುರ್ಬಳಕೆ: ಇಂದು ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟಿಸಿದ ಈ ಡಾ. ಅಂಬಿಗೇರ್ ಅವರು ಸರಕಾರಿ ಪ್ರೌಢಶಾಲೆ ಕಾತೂರಿನಲ್ಲಿ ಪ್ರಭಾರ ಮುಖ್ಯಾಧ್ಯಾಪಕರಾಗಿದ್ದಾಗ ವಿಶೇಷ ಚೇತನ ಮಕ್ಕಳಿಗೆ ಬರುವ ಅನುದಾನವನ್ನು ಬೇಕಾಬಿಟ್ಟಿ ಬಳಕೆ ಮಾಡಿದ್ದಾರೆ ಸರ್ಕಾರದಿಂದ ಮಕ್ಕಳಿಗೆ ಬರುವ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎಂದು ಗೊತ್ತಿಲ್ಲದ ಈ ಶಿಕ್ಷಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿದ್ದು ವಿಪರ್ಯಾಸ.
ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದ ಆರೋಪ: ಈ ಸರ್ಕಾರಿ ಅಧಿಕಾರಿ ಡಾಕ್ಟರ್ ಅಂಬಿಗೇರ ಸಾಹೇಬರು ಸರಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡುವ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಸುಳ್ಳು ದಾಖಲೆಗಳನ್ನು ನೀಡಿ ಪಡೆದಿದ್ದಾರೆ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವ ಈ ಪ್ರಮಾಣ ಪತ್ರವನ್ನು ಮುಂಡಗೋಡದ ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ದಾಖಲೆಗಳನ್ನು ಪರಿಶೀಲಿಸದೆ ಹೇಗೆ ನೀಡಿದರು ಎಂಬುದು ತಿಳಿಯದಾಗಿದೆ. ಇನ್ನಾದರೂ ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.
ವರದಿ: ಮಂಜುನಾಥ್ ಎಫ್ ಎಚ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…