Latest

ಖಾಸಗಿ ಫೈನಾನ್ಸ್ ಕಂಪನಿಯ ಶಾಖೆ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ…!

ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗೇರ್ ಉದ್ಘಾಟಿಸಿದ್ದಾರೆ.

ಇದೇನ್ರೀ ಅವರು ಉದ್ಘಾಟನೆ ಮಾಡಿದರೆ ಏನಾಯ್ತು ಅವರು ಮನುಷ್ಯರೇ ಅಲ್ವಾ ಅನ್ನೋ ಪ್ರಶ್ನೆ ಯಾರಿಗಾದರೂ ಕಾಡುತ್ತೆ.. ಮಾಡ್ಬಾರ್ದು ಯಾಕಂದ್ರೆ ಅವರೊಬ್ಬ ಸರ್ಕಾರಿ ಅಧಿಕಾರಿ ಹಾಗಾಗಿ. ಅತ್ತ ಸರ್ಕಾರ ಈ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ತಯಾರಾಗಿದ್ದರೆ ಇತ್ತ ಈ ಅಧಿಕಾರಿ ಅದೇ ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟನೆ ಮಾಡಿದ್ದಾರೆ ಹಾಗಾದರೆ ಈ ಸರ್ಕಾರಿ ಅಧಿಕಾರಿಗೆ ತನ್ನ ಕರ್ತವ್ಯವೇನು ಎನ್ನುವ ಕನಿಷ್ಠ ಜ್ಞಾನ ಇಲ್ಲವಾ ಎಂದು ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಮಾತನಾಡುತ್ತಿದ್ದಾರೆ.

ಈ ಹಿಂದೆ ದಲಿತ ಶಿಕ್ಷಕರ ಮೇಲೆ ಕೈ ಮಾಡಿದ್ದು ಇದೆ ಅಧಿಕಾರಿ :-ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿರುವ ಡಾ. ಅಂಬಿಗೇರ್ ಅವರು ಹುನಗುಂದ ಪ್ರೌಢಶಾಲೆಯಲ್ಲಿ ಒರ್ವ ದಲಿತ ಶಿಕ್ಷಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಇರುತ್ತದೆ. ಹಾಗಾಗಿ ಇವರ ತಂಟೆಗೆ ಯಾರು ಹೋಗಲ್ವೇನೊ ಅನಿಸುತ್ತೆ.
ಶಿಕ್ಷಣಾಧಿಕಾರಿ ಹೇಳೋದೇನು..? ಈ ಬಗ್ಗೆ ಮುಂಡಗೋಡದ ಶಿಕ್ಷಣಾಧಿಕಾರಿಗೆ ಕೇಳಿದಾಗ ವಿಷಯ ಗಮನಕ್ಕೆ ಬಂದಿದ್ದು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

CWSN ಮಕ್ಕಳ ಅನುದಾನ ದುರ್ಬಳಕೆ: ಇಂದು ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟಿಸಿದ ಈ ಡಾ. ಅಂಬಿಗೇರ್ ಅವರು ಸರಕಾರಿ ಪ್ರೌಢಶಾಲೆ ಕಾತೂರಿನಲ್ಲಿ ಪ್ರಭಾರ ಮುಖ್ಯಾಧ್ಯಾಪಕರಾಗಿದ್ದಾಗ ವಿಶೇಷ ಚೇತನ ಮಕ್ಕಳಿಗೆ ಬರುವ ಅನುದಾನವನ್ನು ಬೇಕಾಬಿಟ್ಟಿ ಬಳಕೆ ಮಾಡಿದ್ದಾರೆ ಸರ್ಕಾರದಿಂದ ಮಕ್ಕಳಿಗೆ ಬರುವ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎಂದು ಗೊತ್ತಿಲ್ಲದ ಈ ಶಿಕ್ಷಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿದ್ದು ವಿಪರ್ಯಾಸ.

ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದ ಆರೋಪ: ಈ ಸರ್ಕಾರಿ ಅಧಿಕಾರಿ ಡಾಕ್ಟರ್ ಅಂಬಿಗೇರ ಸಾಹೇಬರು ಸರಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡುವ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಸುಳ್ಳು ದಾಖಲೆಗಳನ್ನು ನೀಡಿ ಪಡೆದಿದ್ದಾರೆ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವ ಈ ಪ್ರಮಾಣ ಪತ್ರವನ್ನು ಮುಂಡಗೋಡದ ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ದಾಖಲೆಗಳನ್ನು ಪರಿಶೀಲಿಸದೆ ಹೇಗೆ ನೀಡಿದರು ಎಂಬುದು ತಿಳಿಯದಾಗಿದೆ. ಇನ್ನಾದರೂ ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

2 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

15 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago