Latest

ಖಾಸಗಿ ಫೈನಾನ್ಸ್ ಕಂಪನಿಯ ಶಾಖೆ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ…!

ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗೇರ್ ಉದ್ಘಾಟಿಸಿದ್ದಾರೆ.

ಇದೇನ್ರೀ ಅವರು ಉದ್ಘಾಟನೆ ಮಾಡಿದರೆ ಏನಾಯ್ತು ಅವರು ಮನುಷ್ಯರೇ ಅಲ್ವಾ ಅನ್ನೋ ಪ್ರಶ್ನೆ ಯಾರಿಗಾದರೂ ಕಾಡುತ್ತೆ.. ಮಾಡ್ಬಾರ್ದು ಯಾಕಂದ್ರೆ ಅವರೊಬ್ಬ ಸರ್ಕಾರಿ ಅಧಿಕಾರಿ ಹಾಗಾಗಿ. ಅತ್ತ ಸರ್ಕಾರ ಈ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ತಯಾರಾಗಿದ್ದರೆ ಇತ್ತ ಈ ಅಧಿಕಾರಿ ಅದೇ ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟನೆ ಮಾಡಿದ್ದಾರೆ ಹಾಗಾದರೆ ಈ ಸರ್ಕಾರಿ ಅಧಿಕಾರಿಗೆ ತನ್ನ ಕರ್ತವ್ಯವೇನು ಎನ್ನುವ ಕನಿಷ್ಠ ಜ್ಞಾನ ಇಲ್ಲವಾ ಎಂದು ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಮಾತನಾಡುತ್ತಿದ್ದಾರೆ.

ಈ ಹಿಂದೆ ದಲಿತ ಶಿಕ್ಷಕರ ಮೇಲೆ ಕೈ ಮಾಡಿದ್ದು ಇದೆ ಅಧಿಕಾರಿ :-ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿರುವ ಡಾ. ಅಂಬಿಗೇರ್ ಅವರು ಹುನಗುಂದ ಪ್ರೌಢಶಾಲೆಯಲ್ಲಿ ಒರ್ವ ದಲಿತ ಶಿಕ್ಷಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಇರುತ್ತದೆ. ಹಾಗಾಗಿ ಇವರ ತಂಟೆಗೆ ಯಾರು ಹೋಗಲ್ವೇನೊ ಅನಿಸುತ್ತೆ.
ಶಿಕ್ಷಣಾಧಿಕಾರಿ ಹೇಳೋದೇನು..? ಈ ಬಗ್ಗೆ ಮುಂಡಗೋಡದ ಶಿಕ್ಷಣಾಧಿಕಾರಿಗೆ ಕೇಳಿದಾಗ ವಿಷಯ ಗಮನಕ್ಕೆ ಬಂದಿದ್ದು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

CWSN ಮಕ್ಕಳ ಅನುದಾನ ದುರ್ಬಳಕೆ: ಇಂದು ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟಿಸಿದ ಈ ಡಾ. ಅಂಬಿಗೇರ್ ಅವರು ಸರಕಾರಿ ಪ್ರೌಢಶಾಲೆ ಕಾತೂರಿನಲ್ಲಿ ಪ್ರಭಾರ ಮುಖ್ಯಾಧ್ಯಾಪಕರಾಗಿದ್ದಾಗ ವಿಶೇಷ ಚೇತನ ಮಕ್ಕಳಿಗೆ ಬರುವ ಅನುದಾನವನ್ನು ಬೇಕಾಬಿಟ್ಟಿ ಬಳಕೆ ಮಾಡಿದ್ದಾರೆ ಸರ್ಕಾರದಿಂದ ಮಕ್ಕಳಿಗೆ ಬರುವ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎಂದು ಗೊತ್ತಿಲ್ಲದ ಈ ಶಿಕ್ಷಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿದ್ದು ವಿಪರ್ಯಾಸ.

ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದ ಆರೋಪ: ಈ ಸರ್ಕಾರಿ ಅಧಿಕಾರಿ ಡಾಕ್ಟರ್ ಅಂಬಿಗೇರ ಸಾಹೇಬರು ಸರಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡುವ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಸುಳ್ಳು ದಾಖಲೆಗಳನ್ನು ನೀಡಿ ಪಡೆದಿದ್ದಾರೆ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವ ಈ ಪ್ರಮಾಣ ಪತ್ರವನ್ನು ಮುಂಡಗೋಡದ ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ದಾಖಲೆಗಳನ್ನು ಪರಿಶೀಲಿಸದೆ ಹೇಗೆ ನೀಡಿದರು ಎಂಬುದು ತಿಳಿಯದಾಗಿದೆ. ಇನ್ನಾದರೂ ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

6 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

12 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

12 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago