Latest

ಖಾಸಗಿ ಫೈನಾನ್ಸ್ ಕಂಪನಿಯ ಶಾಖೆ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ…!

ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗೇರ್ ಉದ್ಘಾಟಿಸಿದ್ದಾರೆ.

ಇದೇನ್ರೀ ಅವರು ಉದ್ಘಾಟನೆ ಮಾಡಿದರೆ ಏನಾಯ್ತು ಅವರು ಮನುಷ್ಯರೇ ಅಲ್ವಾ ಅನ್ನೋ ಪ್ರಶ್ನೆ ಯಾರಿಗಾದರೂ ಕಾಡುತ್ತೆ.. ಮಾಡ್ಬಾರ್ದು ಯಾಕಂದ್ರೆ ಅವರೊಬ್ಬ ಸರ್ಕಾರಿ ಅಧಿಕಾರಿ ಹಾಗಾಗಿ. ಅತ್ತ ಸರ್ಕಾರ ಈ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ತಯಾರಾಗಿದ್ದರೆ ಇತ್ತ ಈ ಅಧಿಕಾರಿ ಅದೇ ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟನೆ ಮಾಡಿದ್ದಾರೆ ಹಾಗಾದರೆ ಈ ಸರ್ಕಾರಿ ಅಧಿಕಾರಿಗೆ ತನ್ನ ಕರ್ತವ್ಯವೇನು ಎನ್ನುವ ಕನಿಷ್ಠ ಜ್ಞಾನ ಇಲ್ಲವಾ ಎಂದು ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಮಾತನಾಡುತ್ತಿದ್ದಾರೆ.

ಈ ಹಿಂದೆ ದಲಿತ ಶಿಕ್ಷಕರ ಮೇಲೆ ಕೈ ಮಾಡಿದ್ದು ಇದೆ ಅಧಿಕಾರಿ :-ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿರುವ ಡಾ. ಅಂಬಿಗೇರ್ ಅವರು ಹುನಗುಂದ ಪ್ರೌಢಶಾಲೆಯಲ್ಲಿ ಒರ್ವ ದಲಿತ ಶಿಕ್ಷಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಇರುತ್ತದೆ. ಹಾಗಾಗಿ ಇವರ ತಂಟೆಗೆ ಯಾರು ಹೋಗಲ್ವೇನೊ ಅನಿಸುತ್ತೆ.
ಶಿಕ್ಷಣಾಧಿಕಾರಿ ಹೇಳೋದೇನು..? ಈ ಬಗ್ಗೆ ಮುಂಡಗೋಡದ ಶಿಕ್ಷಣಾಧಿಕಾರಿಗೆ ಕೇಳಿದಾಗ ವಿಷಯ ಗಮನಕ್ಕೆ ಬಂದಿದ್ದು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

CWSN ಮಕ್ಕಳ ಅನುದಾನ ದುರ್ಬಳಕೆ: ಇಂದು ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟಿಸಿದ ಈ ಡಾ. ಅಂಬಿಗೇರ್ ಅವರು ಸರಕಾರಿ ಪ್ರೌಢಶಾಲೆ ಕಾತೂರಿನಲ್ಲಿ ಪ್ರಭಾರ ಮುಖ್ಯಾಧ್ಯಾಪಕರಾಗಿದ್ದಾಗ ವಿಶೇಷ ಚೇತನ ಮಕ್ಕಳಿಗೆ ಬರುವ ಅನುದಾನವನ್ನು ಬೇಕಾಬಿಟ್ಟಿ ಬಳಕೆ ಮಾಡಿದ್ದಾರೆ ಸರ್ಕಾರದಿಂದ ಮಕ್ಕಳಿಗೆ ಬರುವ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎಂದು ಗೊತ್ತಿಲ್ಲದ ಈ ಶಿಕ್ಷಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿದ್ದು ವಿಪರ್ಯಾಸ.

ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದ ಆರೋಪ: ಈ ಸರ್ಕಾರಿ ಅಧಿಕಾರಿ ಡಾಕ್ಟರ್ ಅಂಬಿಗೇರ ಸಾಹೇಬರು ಸರಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡುವ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಸುಳ್ಳು ದಾಖಲೆಗಳನ್ನು ನೀಡಿ ಪಡೆದಿದ್ದಾರೆ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವ ಈ ಪ್ರಮಾಣ ಪತ್ರವನ್ನು ಮುಂಡಗೋಡದ ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ದಾಖಲೆಗಳನ್ನು ಪರಿಶೀಲಿಸದೆ ಹೇಗೆ ನೀಡಿದರು ಎಂಬುದು ತಿಳಿಯದಾಗಿದೆ. ಇನ್ನಾದರೂ ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago