Latest

ಖಾಸಗಿ ಫೈನಾನ್ಸ್ ಕಂಪನಿಯ ಶಾಖೆ ಉದ್ಘಾಟಿಸಿದ ಶಿಕ್ಷಣ ಇಲಾಖೆಯ ಅಧಿಕಾರಿ…!

ಮುಂಡಗೋಡ ಇಂದು ಮುಂಡಗೋಡಿನಲ್ಲಿ ಖಾಸಗಿ ಬಜಾಜ್ ಕಂಪನಿಯ ಶಾಖೆಯು ಉದ್ಘಾಟನೆಯಾಗಿದ್ದು ಈ ಯಾಕೆ ಇನ್ನು ಮುಂಡಗೋಡದ ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗೇರ್ ಉದ್ಘಾಟಿಸಿದ್ದಾರೆ.

ಇದೇನ್ರೀ ಅವರು ಉದ್ಘಾಟನೆ ಮಾಡಿದರೆ ಏನಾಯ್ತು ಅವರು ಮನುಷ್ಯರೇ ಅಲ್ವಾ ಅನ್ನೋ ಪ್ರಶ್ನೆ ಯಾರಿಗಾದರೂ ಕಾಡುತ್ತೆ.. ಮಾಡ್ಬಾರ್ದು ಯಾಕಂದ್ರೆ ಅವರೊಬ್ಬ ಸರ್ಕಾರಿ ಅಧಿಕಾರಿ ಹಾಗಾಗಿ. ಅತ್ತ ಸರ್ಕಾರ ಈ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ತಯಾರಾಗಿದ್ದರೆ ಇತ್ತ ಈ ಅಧಿಕಾರಿ ಅದೇ ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟನೆ ಮಾಡಿದ್ದಾರೆ ಹಾಗಾದರೆ ಈ ಸರ್ಕಾರಿ ಅಧಿಕಾರಿಗೆ ತನ್ನ ಕರ್ತವ್ಯವೇನು ಎನ್ನುವ ಕನಿಷ್ಠ ಜ್ಞಾನ ಇಲ್ಲವಾ ಎಂದು ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು ಮಾತನಾಡುತ್ತಿದ್ದಾರೆ.

ಈ ಹಿಂದೆ ದಲಿತ ಶಿಕ್ಷಕರ ಮೇಲೆ ಕೈ ಮಾಡಿದ್ದು ಇದೆ ಅಧಿಕಾರಿ :-ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿರುವ ಡಾ. ಅಂಬಿಗೇರ್ ಅವರು ಹುನಗುಂದ ಪ್ರೌಢಶಾಲೆಯಲ್ಲಿ ಒರ್ವ ದಲಿತ ಶಿಕ್ಷಕನ ಮೇಲೆ ಹಲ್ಲೆ ಮಾಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಇರುತ್ತದೆ. ಹಾಗಾಗಿ ಇವರ ತಂಟೆಗೆ ಯಾರು ಹೋಗಲ್ವೇನೊ ಅನಿಸುತ್ತೆ.
ಶಿಕ್ಷಣಾಧಿಕಾರಿ ಹೇಳೋದೇನು..? ಈ ಬಗ್ಗೆ ಮುಂಡಗೋಡದ ಶಿಕ್ಷಣಾಧಿಕಾರಿಗೆ ಕೇಳಿದಾಗ ವಿಷಯ ಗಮನಕ್ಕೆ ಬಂದಿದ್ದು ಕಾರಣ ಕೇಳಿ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

CWSN ಮಕ್ಕಳ ಅನುದಾನ ದುರ್ಬಳಕೆ: ಇಂದು ಖಾಸಗಿ ಫೈನಾನ್ಸ್ ಕಂಪನಿಯ ಶಾಖೆಯನ್ನು ಉದ್ಘಾಟಿಸಿದ ಈ ಡಾ. ಅಂಬಿಗೇರ್ ಅವರು ಸರಕಾರಿ ಪ್ರೌಢಶಾಲೆ ಕಾತೂರಿನಲ್ಲಿ ಪ್ರಭಾರ ಮುಖ್ಯಾಧ್ಯಾಪಕರಾಗಿದ್ದಾಗ ವಿಶೇಷ ಚೇತನ ಮಕ್ಕಳಿಗೆ ಬರುವ ಅನುದಾನವನ್ನು ಬೇಕಾಬಿಟ್ಟಿ ಬಳಕೆ ಮಾಡಿದ್ದಾರೆ ಸರ್ಕಾರದಿಂದ ಮಕ್ಕಳಿಗೆ ಬರುವ ಅನುದಾನವನ್ನು ಹೇಗೆ ಬಳಕೆ ಮಾಡಬೇಕು ಎಂದು ಗೊತ್ತಿಲ್ಲದ ಈ ಶಿಕ್ಷಕ ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿಯಾಗಿದ್ದು ವಿಪರ್ಯಾಸ.

ಪರಿಶಿಷ್ಟ ಪಂಗಡದ ಸುಳ್ಳು ಪ್ರಮಾಣ ಪತ್ರ ಪಡೆದ ಆರೋಪ: ಈ ಸರ್ಕಾರಿ ಅಧಿಕಾರಿ ಡಾಕ್ಟರ್ ಅಂಬಿಗೇರ ಸಾಹೇಬರು ಸರಕಾರದಿಂದ ಎಸ್ಸಿ ಎಸ್ಟಿ ಸಮುದಾಯದವರಿಗೆ ನೀಡುವ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಸುಳ್ಳು ದಾಖಲೆಗಳನ್ನು ನೀಡಿ ಪಡೆದಿದ್ದಾರೆ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುವ ಈ ಪ್ರಮಾಣ ಪತ್ರವನ್ನು ಮುಂಡಗೋಡದ ತಹಸಿಲ್ದಾರ್ ಕಚೇರಿಯ ಸಿಬ್ಬಂದಿಗಳು ದಾಖಲೆಗಳನ್ನು ಪರಿಶೀಲಿಸದೆ ಹೇಗೆ ನೀಡಿದರು ಎಂಬುದು ತಿಳಿಯದಾಗಿದೆ. ಇನ್ನಾದರೂ ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆಯೇ ಅಥವಾ ಇಲ್ಲವೋ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕಿದೆ.

ವರದಿ: ಮಂಜುನಾಥ್ ಎಫ್ ಎಚ್

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago