Latest

ಕರ್ನಾಟಕದಲ್ಲಿ ಪತ್ನಿಗೆ ಜೀವಂತ ಸಮಾಧಿ ಮಾಡಲು ಯತ್ನಿಸಿದ ವೃದ್ದ

ಬೆಂಗಳೂರು (ಆ.19): ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬ ವ್ಯಕ್ತಿ ವೃದ್ಧ ಮಹಿಳೆಯೊಂದಿಗೆ ಮಾನವೀಯತೆಯ ಮೀರಿದ ರೀತಿಯಲ್ಲಿ ವರ್ತಿಸುತ್ತಿರುವ ಒಂದು ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯವನ್ನು ನೋಡಿದ ಜನರಲ್ಲಿ ಆಕ್ರೋಶ ಮೂಡಿಸಿದ್ದು, ಕೆಲವರು ಇದು ಕರ್ನಾಟಕದಲ್ಲಿ ನಡೆದ ಘಟನೆ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಒಬ್ಬ ವೃದ್ಧೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವ ದೃಶ್ಯ ಕಾಣಸಿಗುತ್ತದೆ. ಅಲ್ಲದೇ ಆಕೆಯ ಮೇಲೆ ಮಣ್ಣು ಎರಚುತ್ತಾ ಅವಮಾನಕಾರಿ ವರ್ತನೆ ಮಾಡುತ್ತಿರುವುದನ್ನೂ ಸ್ಪಷ್ಟವಾಗಿ ಕಾಣಬಹುದು. ಇದನ್ನು ಆಧಾರವಾಗಿಸಿಕೊಂಡು ಕೆಲ ಫೇಸ್ಬುಕ್ ಬಳಕೆದಾರರು, “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ 65 ವರ್ಷದ ವ್ಯಕ್ತಿ ತನ್ನ 42 ವರ್ಷದ ಸಹೋದರಿಯನ್ನು ಮದುವೆಯಾಗಿ, ನಂತರ ಮೊದಲ ಹೆಂಡತಿಯನ್ನು ಹೀಗೆ ಹಿಂಸಿಸುತ್ತಿದ್ದಾನೆ” ಎಂದು ಸುಳ್ಳು ಕಥನಗಳನ್ನು ಜೋಡಿಸಿ ಹಂಚಿಕೊಂಡಿದ್ದಾರೆ.

ಗೂಗಲ್ ಲೆನ್ಸ್‌ ಮೂಲಕ ವಿಡಿಯೋದ ಪ್ರಮುಖ ಚೌಕಟ್ಟುಗಳನ್ನು ಪರಿಶೀಲಿಸಿದಾಗ, ಅದು ಬಾಂಗ್ಲಾದೇಶದ ಡೈಲಿ ಜುಗಾಂಟರ್ ಯೂಟ್ಯೂಬ್ ಚಾನೆಲ್‌ನಲ್ಲಿ ಪತ್ತೆಯಾಯಿತು. ಈ ಚಾನೆಲ್ ಆಗಸ್ಟ್ 10, 2025 ರಂದು ಅದನ್ನು ಪ್ರಕಟಿಸಿದ್ದು, ಘಟನೆಯು ಬಾಂಗ್ಲಾದೇಶದ ಶೆರ್ಪುರ ಪ್ರದೇಶದಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಅಂದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕರ್ನಾಟಕಕ್ಕೆ ಸಂಬಂಧಪಟ್ಟದ್ದೇ ಅಲ್ಲ. ಸುಳ್ಳು ಪ್ರಚಾರಕ್ಕೆ ಒಳಗಾಗದಂತೆ ನಾಗರಿಕರು ಎಚ್ಚರಿಕೆಯಿಂದ aಇರಬೇಕಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

17 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

22 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

22 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

22 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

22 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago