Latest

ಕರ್ನಾಟಕದಲ್ಲಿ ಪತ್ನಿಗೆ ಜೀವಂತ ಸಮಾಧಿ ಮಾಡಲು ಯತ್ನಿಸಿದ ವೃದ್ದ

ಬೆಂಗಳೂರು (ಆ.19): ಸಾಮಾಜಿಕ ಜಾಲತಾಣಗಳಲ್ಲಿ ಒಬ್ಬ ವ್ಯಕ್ತಿ ವೃದ್ಧ ಮಹಿಳೆಯೊಂದಿಗೆ ಮಾನವೀಯತೆಯ ಮೀರಿದ ರೀತಿಯಲ್ಲಿ ವರ್ತಿಸುತ್ತಿರುವ ಒಂದು ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯವನ್ನು ನೋಡಿದ ಜನರಲ್ಲಿ ಆಕ್ರೋಶ ಮೂಡಿಸಿದ್ದು, ಕೆಲವರು ಇದು ಕರ್ನಾಟಕದಲ್ಲಿ ನಡೆದ ಘಟನೆ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಒಬ್ಬ ವೃದ್ಧೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವ ದೃಶ್ಯ ಕಾಣಸಿಗುತ್ತದೆ. ಅಲ್ಲದೇ ಆಕೆಯ ಮೇಲೆ ಮಣ್ಣು ಎರಚುತ್ತಾ ಅವಮಾನಕಾರಿ ವರ್ತನೆ ಮಾಡುತ್ತಿರುವುದನ್ನೂ ಸ್ಪಷ್ಟವಾಗಿ ಕಾಣಬಹುದು. ಇದನ್ನು ಆಧಾರವಾಗಿಸಿಕೊಂಡು ಕೆಲ ಫೇಸ್ಬುಕ್ ಬಳಕೆದಾರರು, “ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ 65 ವರ್ಷದ ವ್ಯಕ್ತಿ ತನ್ನ 42 ವರ್ಷದ ಸಹೋದರಿಯನ್ನು ಮದುವೆಯಾಗಿ, ನಂತರ ಮೊದಲ ಹೆಂಡತಿಯನ್ನು ಹೀಗೆ ಹಿಂಸಿಸುತ್ತಿದ್ದಾನೆ” ಎಂದು ಸುಳ್ಳು ಕಥನಗಳನ್ನು ಜೋಡಿಸಿ ಹಂಚಿಕೊಂಡಿದ್ದಾರೆ.

ಗೂಗಲ್ ಲೆನ್ಸ್‌ ಮೂಲಕ ವಿಡಿಯೋದ ಪ್ರಮುಖ ಚೌಕಟ್ಟುಗಳನ್ನು ಪರಿಶೀಲಿಸಿದಾಗ, ಅದು ಬಾಂಗ್ಲಾದೇಶದ ಡೈಲಿ ಜುಗಾಂಟರ್ ಯೂಟ್ಯೂಬ್ ಚಾನೆಲ್‌ನಲ್ಲಿ ಪತ್ತೆಯಾಯಿತು. ಈ ಚಾನೆಲ್ ಆಗಸ್ಟ್ 10, 2025 ರಂದು ಅದನ್ನು ಪ್ರಕಟಿಸಿದ್ದು, ಘಟನೆಯು ಬಾಂಗ್ಲಾದೇಶದ ಶೆರ್ಪುರ ಪ್ರದೇಶದಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಅಂದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕರ್ನಾಟಕಕ್ಕೆ ಸಂಬಂಧಪಟ್ಟದ್ದೇ ಅಲ್ಲ. ಸುಳ್ಳು ಪ್ರಚಾರಕ್ಕೆ ಒಳಗಾಗದಂತೆ ನಾಗರಿಕರು ಎಚ್ಚರಿಕೆಯಿಂದ aಇರಬೇಕಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

7 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

14 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

14 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago