Latest

ಕಸ ವಿಚಾರದಲ್ಲಿ ವೃದ್ಧೆಗೆ ಕಂಬಕ್ಕೆ ಕಟ್ಟಿ ಹಲ್ಲೆ: ಶಿವಮೊಗ್ಗದ ಗೌತಮಪುರದಲ್ಲಿ ತೀವ್ರ ಆಕ್ರೋಶ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ಹೋಬಳಿಯ ಗೌತಮಪುರ ಗ್ರಾಮದಲ್ಲಿ ಮಾನವೀಯತೆಯನ್ನು ನಿರ್ಲಜ್ಜವಾಗಿ ಹಿಂಗೋಳಿಸುವಂತಹ ಘಟನೆ ನಡೆದಿದೆ. ಕೇವಲ ಮನೆಯ ಮುಂದೆ ಕಸ ಹಾಕಿದ ಕುರಿತು ಕೇಳಿದ್ದಕ್ಕೆ 67 ವರ್ಷದ ವೃದ್ಧೆ ಮೇಲೆ ತೀವ್ರ ಹಲ್ಲೆ ನಡೆಸಿದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ಹುಚ್ಚಮ್ಮ ಎಂಬ ವೃದ್ಧೆ ಅವರು ತಮ್ಮ ಮನೆಯ ಮುಂದಿನ ಸ್ಥಳದಲ್ಲಿ ಕಸ ಹಾಕುತ್ತಿದ್ದ ಪ್ರೇಮ ಎಂಬ ಮಹಿಳೆಯನ್ನು ಪ್ರಶ್ನಿಸಿದ್ದರು. ಈ ಸರಳ ಪ್ರಶ್ನೆಕೆ ಆಕ್ರೋಶಗೊಂಡ ಪ್ರೇಮ ಮತ್ತು ಅವರ ಬೆಂಬಲಿಗರಾದ ಮಂಜುನಾಥ್ ಹಾಗೂ ದರ್ಶನ್ ಎಂಬ ಇಬ್ಬರು ಯುವಕರು ಹುಚ್ಚಮ್ಮ ಅವರನ್ನು ನಿಂದಿಸಿ, ಮನೆಯಿಂದ ಎಳೆದುಕೊಂಡು ಹೋಗಿ, ಹಗ್ಗದಿಂದ ಕಂಬಕ್ಕೆ ಕಟ್ಟಿಹಾಕಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ.

ಈ ಅಮಾನವೀಯ ದುರಾಚಾರದ ದೃಶ್ಯಗಳು ಮೊಬೈಲ್ ಮೂಲಕ ದೃಶ್ಯೀಕರಿಸಿ ಹರಡಿದ್ದು, ಅದು ಸಾರ್ವಜನಿಕರಲ್ಲಿ ತೀವ್ರ ಕೋಪ ಹಾಗೂ ಬೇಸರಕ್ಕೆ ಕಾರಣವಾಗಿದೆ.

ಹಲ್ಲೆಯಿಂದ ಆಘಾತಕ್ಕೊಳಗಾದ ಹುಚ್ಚಮ್ಮ ಅವರು ಆನಂದಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರ ಪುತ್ರ ಕನ್ನಪ್ಪ, “ನನ್ನ ತಾಯಿಗೆ ನ್ಯಾಯ ಸಿಗಬೇಕು, ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂಬ ಮನವಿಯನ್ನು ಮಾಡಿಕೊಂಡಿದ್ದಾರೆ.

ಆನಂದಪುರ ಪೊಲೀಸರು ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯರ ಅಭಿಪ್ರಾಯ ಪ್ರಕಾರ, ಇಂತಹ ಕ್ರೂರತೆ ಸಾಮಾಜಿಕ ಮೌಲ್ಯಗಳ ಹೀನಾಯ ಸಂಕೇತವಾಗಿದೆ ಮತ್ತು ಆರೋಪಿಗಳಿಗೆ ಗಂಭೀರ ಶಿಕ್ಷೆ ಅಗತ್ಯವಾಗಿದೆ.

 

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

13 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

18 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

18 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

18 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

18 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

23 hours ago