Latest

ಇ-ಮೇಲ್ ಬಾಂಬ್ ಬೆದರಿಕೆ ಪ್ರಕರಣ: ತಮಿಳುನಾಡು ಮೂಲದ ಇಬ್ಬರು ಬಂಧನ, ಪ್ರಮುಖ ಆರೋಪಿ ಮೈಸೂರಿನಲ್ಲಿ ವಶಕ್ಕೆ

ಭಟ್ಕಳ, ಜುಲೈ 15 – ನಗರದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶದಿಂದ ಭಯಾನಕ ವಾತಾವರಣ ಮೂಡಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ತಮಿಳುನಾಡು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಭಟ್ಕಳ ಪೊಲೀಸ್ ಠಾಣೆಗೆ ತನಿಖೆಯು ತಲುಪಿದಂತೆ, ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿ ತನಿಖೆಗೆ ಸಹಕರಿಸಲು ಬಂದಿದ್ದರು. ತನಿಖೆಯ ವೇಳೆ, ಅವರ ಮೊಬೈಲ್‌ನ್ನು ಬಳಸಿಕೊಂಡು ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಶ್ನೆ ಆರಂಭಿಸಿದ್ದಾರೆ.

ಈ ಪ್ರಕರಣದಲ್ಲಿ ನಿಜವಾದ ಮೊದಲು ದಾರಿ ಹಾಕಿದ್ದಂತಹ ವ್ಯಕ್ತಿಯೆನಿಸಿಕೊಂಡಿರುವ ನಿತೀನ್ ಸುರೇಂದ್ರ ಶರ್ಮಾ ಎಂಬಾತನನ್ನು ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಈತ ಮೊದಲು ಹಲವು ರಾಜ್ಯಗಳಲ್ಲಿ ಇಂತಹ ಭಯೋತ್ಪಾದನಾ ಬೆದರಿಕೆ ಸಂದೇಶಗಳನ್ನು ಕಳಿಸಿದ್ದ ಹಿನ್ನೆಲೆ ಇದ್ದು, ಇತನ ವಿರುದ್ಧ ವಿವಿಧ ಪ್ರಕರಣಗಳೂ ದಾಖಲಾಗಿವೆ.

ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಪೊಲೀಸರು ಜಂಟಿಯಾಗಿ ನಡೆಸಿದ ಸಂಶೋಧನೆ ಮೂಲಕ ಆರೋಪಿಯ ಮಾಹಿತಿ ಖಚಿತವಾಗಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಾರವಾರಕ್ಕೆ ಕರೆತರಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸನ್ನಾಹ ನಡೆಯುತ್ತಿದೆ.

ಈ ಪ್ರಕರಣವು ಇತ್ತೀಚಿನ ದಿನಗಳಲ್ಲಿ ಭದ್ರತಾ ವಿಚಾರದಲ್ಲಿ ಎಚ್ಚರಿಕೆಯನ್ನು ಮೂಡಿಸಿದೆ. ಈ ರೀತಿಯ ಸೈಬರ್ ಬೆದರಿಕೆಗಳ ವಿರುದ್ಧ ಪೊಲೀಸರು ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ವರದಿ: ಮಂಜುನಾಥ ಎಫ್ ಎಚ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

13 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago