ಭಟ್ಕಳ, ಜುಲೈ 15 – ನಗರದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶದಿಂದ ಭಯಾನಕ ವಾತಾವರಣ ಮೂಡಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ತಮಿಳುನಾಡು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಭಟ್ಕಳ ಪೊಲೀಸ್ ಠಾಣೆಗೆ ತನಿಖೆಯು ತಲುಪಿದಂತೆ, ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿ ತನಿಖೆಗೆ ಸಹಕರಿಸಲು ಬಂದಿದ್ದರು. ತನಿಖೆಯ ವೇಳೆ, ಅವರ ಮೊಬೈಲ್ನ್ನು ಬಳಸಿಕೊಂಡು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಶ್ನೆ ಆರಂಭಿಸಿದ್ದಾರೆ.
ಈ ಪ್ರಕರಣದಲ್ಲಿ ನಿಜವಾದ ಮೊದಲು ದಾರಿ ಹಾಕಿದ್ದಂತಹ ವ್ಯಕ್ತಿಯೆನಿಸಿಕೊಂಡಿರುವ ನಿತೀನ್ ಸುರೇಂದ್ರ ಶರ್ಮಾ ಎಂಬಾತನನ್ನು ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಈತ ಮೊದಲು ಹಲವು ರಾಜ್ಯಗಳಲ್ಲಿ ಇಂತಹ ಭಯೋತ್ಪಾದನಾ ಬೆದರಿಕೆ ಸಂದೇಶಗಳನ್ನು ಕಳಿಸಿದ್ದ ಹಿನ್ನೆಲೆ ಇದ್ದು, ಇತನ ವಿರುದ್ಧ ವಿವಿಧ ಪ್ರಕರಣಗಳೂ ದಾಖಲಾಗಿವೆ.
ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಪೊಲೀಸರು ಜಂಟಿಯಾಗಿ ನಡೆಸಿದ ಸಂಶೋಧನೆ ಮೂಲಕ ಆರೋಪಿಯ ಮಾಹಿತಿ ಖಚಿತವಾಗಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಾರವಾರಕ್ಕೆ ಕರೆತರಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸನ್ನಾಹ ನಡೆಯುತ್ತಿದೆ.
ಈ ಪ್ರಕರಣವು ಇತ್ತೀಚಿನ ದಿನಗಳಲ್ಲಿ ಭದ್ರತಾ ವಿಚಾರದಲ್ಲಿ ಎಚ್ಚರಿಕೆಯನ್ನು ಮೂಡಿಸಿದೆ. ಈ ರೀತಿಯ ಸೈಬರ್ ಬೆದರಿಕೆಗಳ ವಿರುದ್ಧ ಪೊಲೀಸರು ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ವರದಿ: ಮಂಜುನಾಥ ಎಫ್ ಎಚ್
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…