Latest

ಇ-ಮೇಲ್ ಬಾಂಬ್ ಬೆದರಿಕೆ ಪ್ರಕರಣ: ತಮಿಳುನಾಡು ಮೂಲದ ಇಬ್ಬರು ಬಂಧನ, ಪ್ರಮುಖ ಆರೋಪಿ ಮೈಸೂರಿನಲ್ಲಿ ವಶಕ್ಕೆ

ಭಟ್ಕಳ, ಜುಲೈ 15 – ನಗರದಲ್ಲಿ ಬಾಂಬ್ ಸ್ಫೋಟ ಮಾಡುವುದಾಗಿ ಇ-ಮೇಲ್ ಮೂಲಕ ಬಂದಿದ್ದ ಬೆದರಿಕೆ ಸಂದೇಶದಿಂದ ಭಯಾನಕ ವಾತಾವರಣ ಮೂಡಿತ್ತು. ಪ್ರಕರಣದ ಗಂಭೀರತೆ ಅರಿತ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ತಮಿಳುನಾಡು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಭಟ್ಕಳ ಪೊಲೀಸ್ ಠಾಣೆಗೆ ತನಿಖೆಯು ತಲುಪಿದಂತೆ, ಕಣ್ಣನ್ ಗುರುಸ್ವಾಮಿ ಎಂಬ ವ್ಯಕ್ತಿ ತನಿಖೆಗೆ ಸಹಕರಿಸಲು ಬಂದಿದ್ದರು. ತನಿಖೆಯ ವೇಳೆ, ಅವರ ಮೊಬೈಲ್‌ನ್ನು ಬಳಸಿಕೊಂಡು ಇ-ಮೇಲ್‌ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದು ಪ್ರಶ್ನೆ ಆರಂಭಿಸಿದ್ದಾರೆ.

ಈ ಪ್ರಕರಣದಲ್ಲಿ ನಿಜವಾದ ಮೊದಲು ದಾರಿ ಹಾಕಿದ್ದಂತಹ ವ್ಯಕ್ತಿಯೆನಿಸಿಕೊಂಡಿರುವ ನಿತೀನ್ ಸುರೇಂದ್ರ ಶರ್ಮಾ ಎಂಬಾತನನ್ನು ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಈತ ಮೊದಲು ಹಲವು ರಾಜ್ಯಗಳಲ್ಲಿ ಇಂತಹ ಭಯೋತ್ಪಾದನಾ ಬೆದರಿಕೆ ಸಂದೇಶಗಳನ್ನು ಕಳಿಸಿದ್ದ ಹಿನ್ನೆಲೆ ಇದ್ದು, ಇತನ ವಿರುದ್ಧ ವಿವಿಧ ಪ್ರಕರಣಗಳೂ ದಾಖಲಾಗಿವೆ.

ಕರ್ನಾಟಕ ಹಾಗೂ ಕೇರಳ ರಾಜ್ಯಗಳ ಪೊಲೀಸರು ಜಂಟಿಯಾಗಿ ನಡೆಸಿದ ಸಂಶೋಧನೆ ಮೂಲಕ ಆರೋಪಿಯ ಮಾಹಿತಿ ಖಚಿತವಾಗಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಇದೀಗ ಈತನನ್ನು ಕಾರವಾರಕ್ಕೆ ಕರೆತರಲಾಗುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುವ ಸನ್ನಾಹ ನಡೆಯುತ್ತಿದೆ.

ಈ ಪ್ರಕರಣವು ಇತ್ತೀಚಿನ ದಿನಗಳಲ್ಲಿ ಭದ್ರತಾ ವಿಚಾರದಲ್ಲಿ ಎಚ್ಚರಿಕೆಯನ್ನು ಮೂಡಿಸಿದೆ. ಈ ರೀತಿಯ ಸೈಬರ್ ಬೆದರಿಕೆಗಳ ವಿರುದ್ಧ ಪೊಲೀಸರು ಗಂಭೀರವಾಗಿ ಕ್ರಮ ಕೈಗೊಂಡಿದ್ದು, ಪ್ರಕರಣದ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ. ವರದಿ: ಮಂಜುನಾಥ ಎಫ್ ಎಚ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago