Latest

ಕೆಜಿಎಫ್‌ ಸೆಟ್‌ನಲ್ಲಿ ಮುಜುಗರ, ಕಿರುಕುಳ, ಮತ್ತಿನ್ನೆಂದೂ ಯಶ್‌ ಜತೆ ಕೆಲಸ ಮಾಡಲ್ಲ; ಶ್ರೀನಿಧಿ ಶೆಟ್ಟಿ ಸ್ಪಷ್ಟನೆ

ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ಸಿನಿಮಾ ಎಂದರೆ ಅದು ‘ಕೆಜಿಎಫ್‌; ಚಾಪ್ಟರ್‌ 2’. ಈ ಸಿನಿಮಾ ರಿಲೀಸ್‌ ಆಗಿದ್ದೇ ತಡ, ಇಡೀ ಭಾರತೀಯ ಚಿತ್ರರಂಗವೇ ಕರುನಾಡಿನತ್ತ ಹೊರಳಿತು. ನಟ ಯಶ್‌ ಪ್ಯಾನ್‌ ಇಂಡಿಯಾ ಸೆನ್ಸೆಷನ್‌ ಸ್ಟಾರ್‌ ಆಗಿ ಹೊರಹೊಮ್ಮಿದರು. ಕೇವಲ ಯಶ್‌ ಮಾತ್ರವಲ್ಲ ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್‌ ನೀಲ್‌, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್‌, ಛಾಯಾಗ್ರಾಹಕ ಭುವನ್‌ ಗೌಡ ಹೆಸರು ಮಾಡಿದರು.
ನಿರ್ದೇಶಕ ಪ್ರಶಾಂತ್‌ ನೀಲ್‌ ಸದ್ಯ ಹಲವು ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದರೆ, ಇತ್ತ ಈ ಚಿತ್ರದ ಕಲಾವಿದರು, ತಂತ್ರಜ್ಞರೂ ಸಹ ಬಿಜಿಯಾಗಿದ್ದಾರೆ. ನಟ ಯಶ್‌ ಸಹ ಇನ್ನೇನು ಏಪ್ರಿಲ್‌ ತಿಂಗಳ ಕೊನೆಯಲ್ಲಿ ತಮ್ಮ ಮುಂದಿನ ಸಿನಿಮಾ ಅನೌನ್ಸ್‌ ಮಾಡಲಿದ್ದಾರೆ. ನಟಿ ಶ್ರೀನಿಧಿ ಶೆಟ್ಟಿ ಸಹ ತಮಿಳಿನ ಕೋಬ್ರಾ ಸಿನಿಮಾದಲ್ಲಿ ನಟಿಸುವ ಮೂಲಕ ಕಾಲಿವುಡ್‌ನಲ್ಲಿ ಖಾತೆ ತೆರೆದರು. ಇನ್ನೇನು ಹೊಸ ಸಿನಿಮಾಗಳನ್ನೂ ಒಪ್ಪಿಕೊಂಡಿದ್ದಾರೆ. ಹೀಗಿರುವಾಗಲೇ ಇದೇ ನಟಿಯ ವಿರುದ್ಧವೀಗ ಯಶ್‌ ಅಭಿಮಾನಿಗಳು ಗರಂ ಆಗಿದ್ದಾರೆ!
ಕೆಜಿಎಫ್‌ ಸಿನಿಮಾದ ಶೂಟಿಂಗ್‌ ಸೆಟ್‌ನಲ್ಲಿ ನಟ ಯಶ್‌ ಅವರಿಂದ ಶ್ರೀನಿಧಿ ಶೆಟ್ಟಿ ಕಿರುಕುಳ ಅನುಭವಿಸಿದ್ದಾರೆ ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಉಮೈರ್‌ ಸಂಧು ಈ ವಿಚಾರವನ್ನು ಟ್ವಿಟ್‌ ಮಾಡಿದ್ದು, ನಟಿ ಶ್ರೀನಿಧಿ ಶೆಟ್ಟಿಯ ಹೇಳಿಕೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ಕೆಜಿಎಫ್‌ ಚಾಪ್ಟರ್‌ 2 ಶೂಟಿಂಗ್‌ ಸೆಟ್‌ನಲ್ಲಿ ಯಶ್‌ ಅವರಿಂದ ನಾನು ಸಾಕಷ್ಟು ಮುಜುಗರಕ್ಕೊಳಗಾಗಿದ್ದೇನೆ. ಇನ್ನೆಂದೂ ನಾನು ಯಶ್‌ ಜೊತೆ ಕೆಲಸ ಮಾಡಲ್ಲ. ಆತ ವಿಷಕಾರಿ, ಕಿರುಕುಳ ನೀಡುವ ವ್ಯಕ್ತಿತ್ವ” ಎಂದು ಉಮೈರ್‌ ಸಂಧು ಶ್ರೀನಿಧಿ ಹೇಳಿದ್ದಾರೆಂದು ಪೋಸ್ಟ್‌ ಮಾಡಿದ್ದಾರೆ.

ಶ್ರೀನಿಧಿ ಸ್ಪಷ್ಟನೆ..
ಈ ಟ್ವಿಟರ್‌ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ, ಯಶ್‌ ಅಭಿಮಾನಿಗಳು ಗರಂ ಆಗಿದ್ದರು. ನಟಿಯ ವಿರುದ್ಧ ತಿರುಗಿ ಬಿದ್ದಿದ್ದರು. ಅಭಿಮಾನಿಗಳ ಈ ವರ್ತನೆ ಕಂಡು ಸುದ್ದಿಯ ಸತ್ಯಾಸತ್ಯತೆ ತಿಳಿದ ಶ್ರೀನಿಧಿ, ಸೋಷಿಯಲ್‌ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದೊಂದು ಸುಳ್ಳು ಸುದ್ದಿ, ಆ ರೀತಿಯ ಯಾವ ಅನುಭವವವೂ ನನಗಾಗಿಲ್ಲ. ಇದೆಲ್ಲವೂ ಸುಳ್ಳು ಎಂದಿದ್ದಾರೆ.
‘ಕೆಲವರು ಸುಳ್ಳು ಪ್ರಚಾರ ಮತ್ತು ವದಂತಿಗಳನ್ನು ಹಬ್ಬಿಸಲು ಸೋಷಿಯಲ್‌ ಮೀಡಿಯಾ ಬಳಸುತ್ತಾರೆ. ಇದು ಪ್ರೀತಿಯನ್ನು ಹರಡುವ ತಾಣ ಎಂದು ನಾನು ಭಾವಿಸುತ್ತೇನೆ. ಯಶ್‌ ಜತೆ ಕೆಲಸ ಮಾಡಲು ನಾನು ನಿಜಕ್ಕೂ ಅದೃಷ್ಟಮಾಡಿದ್ದೆ. ಅವರೊಬ್ಬ ರಿಯಲ್‌ ಜೆಂಟಲ್‌ಮ್ಯಾನ್, ಒಬ್ಬ ಮೆಂಟರ್‌, ಅಷ್ಟೇ ಒಳ್ಳೆಯ ಸ್ನೇಹಿತ, ನನ್ನ ಸ್ಫೂರ್ತಿ. ಇದೆಲ್ಲದಕ್ಕಿಂತ ಹೆಚ್ಚಾಗಿ ನಾನು ರಾಕಿಂಗ್‌ ಸ್ಟಾರ್‌ ಯಶ್‌ ಅವರ ಬಹುದೊಡ್ಡ ಅಭಿಮಾನಿ” ಎಂದಿದ್ದಾರೆ ಶ್ರೀನಿಧಿ.

ಭ್ರಷ್ಟರ ಬೇಟೆ

Recent Posts

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

1 hour ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

1 hour ago

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

5 hours ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

5 hours ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

10 hours ago

ಮಾಜಿ ಪ್ರಧಾನಿ ದೇವೇಗೌಡರಿಗೆ 1.25 ಕೋಟಿ ಮೌಲ್ಯದ ಐಷಾರಾಮಿ ಕಾರು: ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…

10 hours ago