Latest

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಪ್ರಸಾದ್, ಲಿಖಿತ್ ಕಡ್ಡಿ ಹಾಗೂ ಜಯದೀಪ್ ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಕುಖ್ಯಾತ ಮನೆಕಳ್ಳ ಪೆಪ್ಸಿ ರಘು ತಂಡದ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 21ರಂದು ಕತ್ರಿಗುಪ್ಪೆಯ ನಿವಾಸಿ ವಿಶ್ವನಾಥ್ ಅವರು ತಮ್ಮ ಕುಟುಂಬದೊಂದಿಗೆ ಮದುವೆ ಕಾರ್ಯಕ್ರಮಕ್ಕೆ ಚಿಕ್ಕಮಗಳೂರಿಗೆ ತೆರಳಿದ್ದರು. ಈ ವೇಳೆ ಟೆರಸ್ ಮೂಲಕ ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿದ್ದ 24 ಲಕ್ಷ ನಗದು ಹಣ, 175 ಗ್ರಾಂ ಚಿನ್ನಾಭರಣ ಹಾಗೂ ಸುಮಾರು ಒಂದೂವರೆ ಕೆಜಿ ಬೆಳ್ಳಿ ನಾಣ್ಯವನ್ನು ಲೂಟಿ ಮಾಡಿದ್ದರು.

ಕಳ್ಳತನದ ನಂತರ ಆರೋಪಿಗಳು ದೋಚಿದ ಹಣವನ್ನು ಗೋವಾ ಕ್ಯಾಸಿನೊಗಳಲ್ಲಿ ಫೂಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಪೆಪ್ಸಿ ರಘು ಎಂಬ ರಘುವನಹಳ್ಳಿ ಮೂಲದ ವ್ಯಕ್ತಿ ಇನ್ನೂ ಪರಾರಿಯಾಗಿದ್ದಾನೆ. ಪೊಲೀಸರ ತಂಡ ಈಗಾಗಲೇ ಆತನ ಪತ್ತೆಗೆ ಬಲೆ ಬೀಸಿದ್ದು, ಶೀಘ್ರದಲ್ಲೇ ಬಂಧನ ಸಾಧ್ಯವೆಂಬ ನಂಬಿಕೆ ವ್ಯಕ್ತಪಡಿಸಲಾಗಿದೆ.

ಬಂಧಿತ ಆರೋಪಿಗಳಿಂದ 9 ಲಕ್ಷ ನಗದು, 175 ಗ್ರಾಂ ಚಿನ್ನಾಭರಣ ಹಾಗೂ ಒಂದೂವರೆ ಕೆಜಿ ಬೆಳ್ಳಿ ನಾಣ್ಯ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ನಂತರ ಇನ್ನಷ್ಟು ಕಳ್ಳತನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

12 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

19 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

19 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago