Latest

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಪ್ರಸಾದ್, ಲಿಖಿತ್ ಕಡ್ಡಿ ಹಾಗೂ ಜಯದೀಪ್ ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಕುಖ್ಯಾತ ಮನೆಕಳ್ಳ ಪೆಪ್ಸಿ ರಘು ತಂಡದ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 21ರಂದು ಕತ್ರಿಗುಪ್ಪೆಯ ನಿವಾಸಿ ವಿಶ್ವನಾಥ್ ಅವರು ತಮ್ಮ ಕುಟುಂಬದೊಂದಿಗೆ ಮದುವೆ ಕಾರ್ಯಕ್ರಮಕ್ಕೆ ಚಿಕ್ಕಮಗಳೂರಿಗೆ ತೆರಳಿದ್ದರು. ಈ ವೇಳೆ ಟೆರಸ್ ಮೂಲಕ ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿದ್ದ 24 ಲಕ್ಷ ನಗದು ಹಣ, 175 ಗ್ರಾಂ ಚಿನ್ನಾಭರಣ ಹಾಗೂ ಸುಮಾರು ಒಂದೂವರೆ ಕೆಜಿ ಬೆಳ್ಳಿ ನಾಣ್ಯವನ್ನು ಲೂಟಿ ಮಾಡಿದ್ದರು.

ಕಳ್ಳತನದ ನಂತರ ಆರೋಪಿಗಳು ದೋಚಿದ ಹಣವನ್ನು ಗೋವಾ ಕ್ಯಾಸಿನೊಗಳಲ್ಲಿ ಫೂಟ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಬಂಧನ ನಡೆದಿದೆ.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಪೆಪ್ಸಿ ರಘು ಎಂಬ ರಘುವನಹಳ್ಳಿ ಮೂಲದ ವ್ಯಕ್ತಿ ಇನ್ನೂ ಪರಾರಿಯಾಗಿದ್ದಾನೆ. ಪೊಲೀಸರ ತಂಡ ಈಗಾಗಲೇ ಆತನ ಪತ್ತೆಗೆ ಬಲೆ ಬೀಸಿದ್ದು, ಶೀಘ್ರದಲ್ಲೇ ಬಂಧನ ಸಾಧ್ಯವೆಂಬ ನಂಬಿಕೆ ವ್ಯಕ್ತಪಡಿಸಲಾಗಿದೆ.

ಬಂಧಿತ ಆರೋಪಿಗಳಿಂದ 9 ಲಕ್ಷ ನಗದು, 175 ಗ್ರಾಂ ಚಿನ್ನಾಭರಣ ಹಾಗೂ ಒಂದೂವರೆ ಕೆಜಿ ಬೆಳ್ಳಿ ನಾಣ್ಯ ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ನಂತರ ಇನ್ನಷ್ಟು ಕಳ್ಳತನ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago