ಉದ್ಯೋಗದ ನಿಮಿತ್ತ ಹೋಟೆಲ್ನಲ್ಲಿ ವಾಸಿಸುತ್ತಿದ್ದ ಫೀಲ್ಡ್ ಎಂಜಿನಿಯರ್ ಮೋಹಿತ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ದುಃಖದ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೋಹಿತ್ ತಮ್ಮ ಪತ್ನಿ ಹಾಗೂ ಆಕೆಯ ಕುಟುಂಬದಿಂದ ಮಾನಸಿಕ ಹಿಂಸೆ ಅನುಭವಿಸುತ್ತಿರುವುದನ್ನು ವಿವರಿಸಿದ ಎಮೋಷನಲ್ ವಿಡಿಯೋ ಸಂದೇಶವೊಂದನ್ನು ರೆಕಾರ್ಡ್ ಮಾಡಿದ್ದಾರೆ.
ವೀಡಿಯೋದಲ್ಲಿ ಭಾವುಕರಾಗಿ ಮಾತನಾಡಿರುವ ಮೋಹಿತ್, “ಈ ವಿಡಿಯೋ ನಿಮಗೆ ಸಿಗುವ ಹೊತ್ತಿಗೆ ನಾನು ಈ ಲೋಕದಲ್ಲಿರಲ್ಲ. ಪುರುಷರಿಗೂ ಪ್ರತ್ಯೇಕವಾಗಿ ಕಾನೂನು ಇದ್ದಿದ್ದರೆ, ಬಹುಶಃ ನಾನು ಈ ತೀರ್ಮಾನ ತೆಗೆದುಕೊಳ್ಳುತ್ತಿರಲಿಲ್ಲ,” ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಆಸ್ತಿಗೆ ಒತ್ತಡ, ಸುಳ್ಳು ಆರೋಪದ ಬೆದರಿಕೆ
ಮೋಹಿತ್ ತಮ್ಮ ಪತ್ನಿ ಪ್ರಿಯಾ ಯಾದವ್ ಹಾಗೂ ಆಕೆಯ ತಾಯಿ–ಮಾಮರಿಂದ ಆಸ್ತಿಯನ್ನು ಅವರ ಹೆಸರಿಗೆ ವರ್ಗಾಯಿಸಲು ಒತ್ತಡ ಬಂದಿದ್ದು, ಹಾಗಿಲ್ಲದಿದ್ದರೆ ದೂರು ನೀಡುವ ಬೆದರಿಕೆ ಬಂದಿತ್ತನ್ನೂ ಹೇಳಿದ್ದಾರೆ. “ನನ್ನ ಹೆಂಡತಿ ಮತ್ತು ಅವಳ ತಾಯಿ ನನ್ನ ಮನಸ್ಸನ್ನು ಕುಗ್ಗಿಸುತ್ತಿದ್ದರು. ಅವರು ಎಲ್ಲಾ ಆಭರಣಗಳು ಹಾಗೂ ಸೀರೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಮನೆ ಮತ್ತು ಆಸ್ತಿಯನ್ನು ಅವರ ಹೆಸರಿಗೆ ಮಾಡದಿದ್ದರೆ, ನನ್ನ ಮೇಲೆ ಹಾಗೂ ನನ್ನ ಕುಟುಂಬದ ಮೇಲೆ ಸುಳ್ಳು ವರದಕ್ಷಿಣೆ ಪ್ರಕರಣ ದಾಖಲಿಸುವುದಾಗಿ ಬೆದರಿಸುತ್ತಿದ್ದರು,” ಎಂದು ಮೋಹಿತ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.
ಪತ್ನಿಯ ವೈವಹಿಕ ಜೀವನದ ಬದಲಾವಣೆ
ಮೂಲತಃ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಿಂದಾದ ಮೋಹಿತ್, ಬಹು ವರ್ಷಗಳ ಪ್ರೇಮ ಸಂಬಂಧದ ಬಳಿಕ ಪ್ರಿಯಾ ಯಾದವ್ ಅವರನ್ನು ಮದುವೆಯಾಗಿದ್ದರು. ಪ್ರಿಯಾ ಬಿಹಾರದ ಸಮಷ್ಟಿಪುರದಲ್ಲಿ ಶಿಕ್ಷಕಿಯಾಗಿ ಕೆಲಸ ಆರಂಭಿಸಿದ ನಂತರ ಅವರ ವರ್ತನೆ ಬದಲಾಗಿದೆ ಎಂದು ಮೋಹಿತ್ ಕುಟುಂಬದವರು ಆರೋಪಿಸಿದ್ದಾರೆ. ಪ್ರಿಯಾ ತನ್ನ ತಾಯಿ ಮತ್ತು ಸಹೋದರನ ಪ್ರಭಾವದಿಂದ ಮೋಹಿತ್ನ್ನು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಳು ಎಂದು ತಿಳಿಸಲಾಗಿದೆ.
ಗರ್ಭಪಾತಕ್ಕೂ ಒತ್ತಡ?
ಮೋಹಿತ್ ತಮ್ಮ ವಿಡಿಯೋದಲ್ಲಿ ಮತ್ತೊಂದು ಗಂಭೀರ ಆರೋಪ ಮಾಡಿದ್ದು, “ನನ್ನ ಹೆಂಡತಿಯ ತಾಯಿ ನನ್ನ ಹೆಂಡತಿಯ ಗರ್ಭಪಾತಕ್ಕೆ ಒತ್ತಡ ಹೇರಿದಳು,” ಎಂಬುದಾಗಿದೆ.
ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಪುರುಷರಿಗೂ ತಕ್ಕ ನ್ಯಾಯ ವ್ಯವಸ್ಥೆ ಇರುವ ಅಗತ್ಯತೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಮೂಡಿಸಿದೆ. ಪೊಲೀಸರು ಈ ಪ್ರಕರಣದ ಸಂಬಂಧ ತನಿಖೆ ಆರಂಭಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…