Categories: CrimeLatest

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು ಕಾರಣಗಳಿಂದ ದಂಪತಿಗಳು ವಿಚ್ಛೇದನದ ದಾರಿಯನ್ನು ಹಿಡಿಯುತ್ತಿರುವುದು ಸಾಮಾನ್ಯವಾಗಿದೆ. ಈ ನಡುವೆ, ಪತ್ನಿಯ ಅಕ್ರಮ ಸಂಬಂಧ ತಿಳಿದಿದ್ದರೂ ಮಕ್ಕಳ ಭವಿಷ್ಯಕ್ಕಾಗಿ ಅದನ್ನು ಸಹಿಸಿಕೊಂಡಿರುವ ವ್ಯಕ್ತಿಯೊಬ್ಬರ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಮಕ್ಕಳಿಗಾಗಿ ಪತ್ನಿಯ ದ್ರೋಹವನ್ನೇ ಸಹಿಸಿಕೊಂಡಿದ್ದೇನೆ” ಎಂದು ಆತ ತನ್ನ ನೋವನ್ನು ಹಂಚಿಕೊಂಡಿದ್ದಾನೆ. ಮೂರು ವರ್ಷಗಳ ಹಿಂದೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿ ಮೋಸ ಮಾಡಿದ ವಿಷಯ ತಿಳಿದಿದ್ದರೂ, ಕುಟುಂಬ ಭಂಗವಾಗಬಾರದೆಂಬ ಕಾರಣಕ್ಕೆ ಆತ ಮೌನವಾಗಿ ಬದುಕು ಮುಂದುವರಿಸಿದ್ದಾನೆ.

ಪತ್ನಿಯೊಂದಿಗೆ ಒಂದೇ ಮನೆಯಲ್ಲಿದ್ದರೂ, ಆಕೆಯ ಮೇಲೆ ಪ್ರೀತಿ ಸಂಪೂರ್ಣವಾಗಿ ಕಳೆದುಕೊಂಡಿರುವುದಾಗಿ ಆತ ಹೇಳಿಕೊಂಡಿದ್ದಾನೆ. ತಂದೆಯಾಗಿ ತನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದರೂ, ದಾಂಪತ್ಯ ಸಂಬಂಧದಿಂದ ಆತ ಭಾವನಾತ್ಮಕವಾಗಿ ಬಹಳ ಹಿಂದೆಯೇ ದೂರವಾಗಿರುವುದಾಗಿ ಸ್ಪಷ್ಟಪಡಿಸಿದ್ದಾನೆ.

ಇತ್ತೀಚೆಗೆ ಮತ್ತೊಬ್ಬ ಮಹಿಳೆಯನ್ನು ಭೇಟಿಯಾದ ಬಳಿಕ ತನ್ನ ಜೀವನದಲ್ಲಿ ಮತ್ತೆ ಸಂತೋಷ ಕಂಡಿರುವುದಾಗಿ ಆತ ಹೇಳಿದ್ದಾನೆ. ಆಕೆ ತನ್ನನ್ನು ಗೌರವದಿಂದ ಕಾಣುತ್ತಾಳೆ, ತನ್ನ ಬದುಕಿಗೆ ಹೊಸ ಅರ್ಥ ನೀಡಿದ್ದಾಳೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾನೆ.

ಈ ಹಿನ್ನೆಲೆಯಲ್ಲಿ, “ಇನ್ನೂ ಪತ್ನಿಗೆ ಬದ್ಧನಾಗಿಯೇ ಇರಬೇಕಾ? ಅಥವಾ ವಿಚ್ಛೇದನ ನೀಡಿ ಹೊಸ ಜೀವನ ಆರಂಭಿಸಬೇಕಾ?” ಎಂಬ ಪ್ರಶ್ನೆಯನ್ನು ಆತ ನೆಟ್ಟಿಗರ ಮುಂದೆ ಇಟ್ಟಿದ್ದಾನೆ. ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕೆಲವರು “ಮೋಸ ಮಾಡಿದ ಪತ್ನಿಯನ್ನು ಕ್ಷಮಿಸುವುದೇ ಮೊದಲ ತಪ್ಪು, ಮಕ್ಕಳಿಗಾಗಿಯೇ ಆದರೂ ದೂರವಾಗಬೇಕು” ಎಂದು ಅಭಿಪ್ರಾಯಪಟ್ಟರೆ, ಇನ್ನೂ ಕೆಲವರು “ಮಕ್ಕಳ ಭವಿಷ್ಯವನ್ನೂ ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago