Latest

ನೀರು ಪೋಲಾಗುತ್ತಿದ್ದರೂ ನಿಗಾ ವಹಿಸದ ಅಧಿಕಾರಿಗಳು.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಡೊಮನಾಳ ಜೆಪಿ (ಸಿದ್ದಪನ ಅಡಿ) ಗ್ರಾಮದಲ್ಲಿ ನೀರಿನ ಟ್ಯಾಂಕ್ ಇದ್ದು, ಈ ಟ್ಯಾಂಕ್ ಗೆ ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನವೂ ನೀರು ಅನಾವಶ್ಯಕವಾಗಿ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೋಲಾಗುತ್ತಿದೆ. ಅಲ್ಲೇ ಹತ್ತಿರವಿರುವ ಒಬ್ಬರನ್ನು ಕೇಳಿದಾಗ ಈ ಟ್ಯಾಂಕ್ ಗೆ ನಳಗಳಿಲ್ಲದೆ ಎಷ್ಟೋ ವರ್ಷಗಳು ಕಳೆದಿವೆ ಎಂದು ತಿಳಿಸಿದರು. ಪ್ರತಿದಿನ ಗ್ರಾಮ ಪಂಚಾಯತಿ ಸಿಬ್ಬಂದಿ ನೋಡಿದರೂ ನೋಡದ ಹಾಗೆ ಇರುತ್ತಾರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಲ್ಲಿಯ ಪ್ರಜ್ಞಾವಂತರು ತಿಳಿಸಿದ್ದಾರೆ.
ಈ ಟ್ಯಾಂಕ್ ನ ಎದುರುಗಡೆಗೆ ಶಾಲೆಯಿದೆ. ಆ ಶಾಲೆಯಲ್ಲಿ ಅದೇಷ್ಟೋ ಪುಟ್ಟ ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಅಲ್ಲೇ ಹತ್ತಿರವಿರುವ ನೀರು ಪೋಲಾಗುತ್ತಿದೆ ಹೊರತು ಆ ಪುಟ್ಟ ವಿದ್ಯಾರ್ಥಿಗಳಿಗೆ ಆ ನೀರು ಸಿಗುತ್ತಿಲ್ಲ. ಈ ಟ್ಯಾಂಕ್ ಸ್ವಚ್ಚಗೊಳಿಸಿ ನಳಗಳ ವ್ಯವಸ್ಥೆ ಮಾಡಿದರೆ ಎಲ್ಲಾ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗುತ್ತದೆ ಎಂಬುದನ್ನು ಅರಿಯದ ಅಧಿಕಾರಿಗಳು ಇದು ನಿಜಕ್ಕೂ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಅಸೂಯೆ ತರುವ ವಿಷಯವಾಗಿದೆ. ಇನ್ನುಮುಂದೆ ಆದರೂ ಈ ಟ್ಯಾಂಕ್ ಗೆ ನಳದ ವ್ಯವಸ್ಥೆ ಕಲ್ಪಿಸಿ, ಪೋಲಾಗುತ್ತಿರುವ ನೀರನ್ನು ತಡೆಗಟ್ಟಿ ಮುಂದಿನ ಪೀಳಿಗೆಗೆ ನೀರು ಸಿಗುವ ಹಾಗೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಲಕ್ಷಣವಾಗಿದೆ. ಈ ವರದಿಯನ್ನು ಗಮನಿಸಿಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್ಚೆತ್ತುಕೊಂಡು ವ್ಯವಸ್ಥೆ ಕಲ್ಪಿಸುತ್ತಾರಾ? ಕಾದು ನೋಡಬೇಕಿದೆ.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago