ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಡೊಮನಾಳ ಜೆಪಿ (ಸಿದ್ದಪನ ಅಡಿ) ಗ್ರಾಮದಲ್ಲಿ ನೀರಿನ ಟ್ಯಾಂಕ್ ಇದ್ದು, ಈ ಟ್ಯಾಂಕ್ ಗೆ ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನವೂ ನೀರು ಅನಾವಶ್ಯಕವಾಗಿ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೋಲಾಗುತ್ತಿದೆ. ಅಲ್ಲೇ ಹತ್ತಿರವಿರುವ ಒಬ್ಬರನ್ನು ಕೇಳಿದಾಗ ಈ ಟ್ಯಾಂಕ್ ಗೆ ನಳಗಳಿಲ್ಲದೆ ಎಷ್ಟೋ ವರ್ಷಗಳು ಕಳೆದಿವೆ ಎಂದು ತಿಳಿಸಿದರು. ಪ್ರತಿದಿನ ಗ್ರಾಮ ಪಂಚಾಯತಿ ಸಿಬ್ಬಂದಿ ನೋಡಿದರೂ ನೋಡದ ಹಾಗೆ ಇರುತ್ತಾರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಲ್ಲಿಯ ಪ್ರಜ್ಞಾವಂತರು ತಿಳಿಸಿದ್ದಾರೆ.
ಈ ಟ್ಯಾಂಕ್ ನ ಎದುರುಗಡೆಗೆ ಶಾಲೆಯಿದೆ. ಆ ಶಾಲೆಯಲ್ಲಿ ಅದೇಷ್ಟೋ ಪುಟ್ಟ ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಅಲ್ಲೇ ಹತ್ತಿರವಿರುವ ನೀರು ಪೋಲಾಗುತ್ತಿದೆ ಹೊರತು ಆ ಪುಟ್ಟ ವಿದ್ಯಾರ್ಥಿಗಳಿಗೆ ಆ ನೀರು ಸಿಗುತ್ತಿಲ್ಲ. ಈ ಟ್ಯಾಂಕ್ ಸ್ವಚ್ಚಗೊಳಿಸಿ ನಳಗಳ ವ್ಯವಸ್ಥೆ ಮಾಡಿದರೆ ಎಲ್ಲಾ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗುತ್ತದೆ ಎಂಬುದನ್ನು ಅರಿಯದ ಅಧಿಕಾರಿಗಳು ಇದು ನಿಜಕ್ಕೂ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಅಸೂಯೆ ತರುವ ವಿಷಯವಾಗಿದೆ. ಇನ್ನುಮುಂದೆ ಆದರೂ ಈ ಟ್ಯಾಂಕ್ ಗೆ ನಳದ ವ್ಯವಸ್ಥೆ ಕಲ್ಪಿಸಿ, ಪೋಲಾಗುತ್ತಿರುವ ನೀರನ್ನು ತಡೆಗಟ್ಟಿ ಮುಂದಿನ ಪೀಳಿಗೆಗೆ ನೀರು ಸಿಗುವ ಹಾಗೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಲಕ್ಷಣವಾಗಿದೆ. ಈ ವರದಿಯನ್ನು ಗಮನಿಸಿಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್ಚೆತ್ತುಕೊಂಡು ವ್ಯವಸ್ಥೆ ಕಲ್ಪಿಸುತ್ತಾರಾ? ಕಾದು ನೋಡಬೇಕಿದೆ.
ವರದಿ: ವಿಶ್ವನಾಥ ಭಜಂತ್ರಿ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…