ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಡೊಮನಾಳ ಜೆಪಿ (ಸಿದ್ದಪನ ಅಡಿ) ಗ್ರಾಮದಲ್ಲಿ ನೀರಿನ ಟ್ಯಾಂಕ್ ಇದ್ದು, ಈ ಟ್ಯಾಂಕ್ ಗೆ ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನವೂ ನೀರು ಅನಾವಶ್ಯಕವಾಗಿ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೋಲಾಗುತ್ತಿದೆ. ಅಲ್ಲೇ ಹತ್ತಿರವಿರುವ ಒಬ್ಬರನ್ನು ಕೇಳಿದಾಗ ಈ ಟ್ಯಾಂಕ್ ಗೆ ನಳಗಳಿಲ್ಲದೆ ಎಷ್ಟೋ ವರ್ಷಗಳು ಕಳೆದಿವೆ ಎಂದು ತಿಳಿಸಿದರು. ಪ್ರತಿದಿನ ಗ್ರಾಮ ಪಂಚಾಯತಿ ಸಿಬ್ಬಂದಿ ನೋಡಿದರೂ ನೋಡದ ಹಾಗೆ ಇರುತ್ತಾರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಲ್ಲಿಯ ಪ್ರಜ್ಞಾವಂತರು ತಿಳಿಸಿದ್ದಾರೆ.
ಈ ಟ್ಯಾಂಕ್ ನ ಎದುರುಗಡೆಗೆ ಶಾಲೆಯಿದೆ. ಆ ಶಾಲೆಯಲ್ಲಿ ಅದೇಷ್ಟೋ ಪುಟ್ಟ ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಅಲ್ಲೇ ಹತ್ತಿರವಿರುವ ನೀರು ಪೋಲಾಗುತ್ತಿದೆ ಹೊರತು ಆ ಪುಟ್ಟ ವಿದ್ಯಾರ್ಥಿಗಳಿಗೆ ಆ ನೀರು ಸಿಗುತ್ತಿಲ್ಲ. ಈ ಟ್ಯಾಂಕ್ ಸ್ವಚ್ಚಗೊಳಿಸಿ ನಳಗಳ ವ್ಯವಸ್ಥೆ ಮಾಡಿದರೆ ಎಲ್ಲಾ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗುತ್ತದೆ ಎಂಬುದನ್ನು ಅರಿಯದ ಅಧಿಕಾರಿಗಳು ಇದು ನಿಜಕ್ಕೂ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಅಸೂಯೆ ತರುವ ವಿಷಯವಾಗಿದೆ. ಇನ್ನುಮುಂದೆ ಆದರೂ ಈ ಟ್ಯಾಂಕ್ ಗೆ ನಳದ ವ್ಯವಸ್ಥೆ ಕಲ್ಪಿಸಿ, ಪೋಲಾಗುತ್ತಿರುವ ನೀರನ್ನು ತಡೆಗಟ್ಟಿ ಮುಂದಿನ ಪೀಳಿಗೆಗೆ ನೀರು ಸಿಗುವ ಹಾಗೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಲಕ್ಷಣವಾಗಿದೆ. ಈ ವರದಿಯನ್ನು ಗಮನಿಸಿಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್ಚೆತ್ತುಕೊಂಡು ವ್ಯವಸ್ಥೆ ಕಲ್ಪಿಸುತ್ತಾರಾ? ಕಾದು ನೋಡಬೇಕಿದೆ.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…