ಹಲ್ಯಾಳ: ಪಟ್ಟಣದ ಶಿವಯೋಗಿ ವೃತ್ತದಲ್ಲಿ ರಸ್ತೆ ಬದಿ ವಾಹನದೊಂದಿಗೆ ನಿಂತಿದ್ದ ಸೈನಿಕನಿಗೆ ಪೋಲಿಸರಿಂದ ಅವಮಾನಕಾರಿ ವರ್ತನೆ ನಡೆಯಿತು. ಅಪರಿಚಿತ ಕಾರಣಕ್ಕಾಗಿ ಪೊಲೀಸರು ಯೋಧನೊಂದಿಗೆ ಏಕವಚನದಲ್ಲಿ ಮಾತನಾಡಿದ ಸಂದರ್ಭ, ಯೋಧನು “ಗೌರವದಿಂದ ಮಾತನಾಡಿ” ಎಂದು ವಿನಂತಿಸಿದಾಗ ವಾಗ್ವಾದವು ಉಲ್ಬಣಗೊಂಡಿತು.
ಸಮಾಲೋಚನೆಯಿಂದ ಮುಂದೆ ಪೊಲೀಸ್ ಅಧಿಕಾರಿಗಳು ಸೈನಿಕ ಮಲ್ಲಿಕಾರ್ಜುನ ಪಾಟೀಲ ಅವರನ್ನು ನಡುರಸ್ತೆಯಲ್ಲೇ ಥಳಿಸಿ, ಬಳಿಕ ಠಾಣೆಗೆ ಕರೆದುಕೊಂಡು ಹೋಗಿ ಮತ್ತೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯ ವಿಡಿಯೋಗಳು ಮತ್ತು ಸ್ಥಳೀಯರ ಪ್ರತಿಕ್ರಿಯೆಗಳಿಂದ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಯಿತು.
ಈ ಘಟನೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಸೈನಿಕರ ಸಂಘದ ಸದಸ್ಯರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ, ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ, ಹಲ್ಲೆಗೊಳಗಾದ ಸೈನಿಕನಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದರು.
ಘಟನೆಯ ಕುರಿತು ಪ್ರತಿಕ್ರಿಯೆ:
ಘಟನೆಗೆ ಪ್ರತಿಕ್ರಿಯಿಸಿದ ಯೋಧ ಮಲ್ಲಿಕಾರ್ಜುನ ಪಾಟೀಲ, “ನಾವು ದೇಶದ ರಕ್ಷಣೆಗಾಗಿ ಸೇವೆ ಮಾಡುತ್ತೇವೆ. ಆದರೆ ಸ್ಥಳೀಯ ಮಟ್ಟದಲ್ಲಿ ನಮಗೆ ಅಗೌರವ ತೋರಿದ ಘಟನೆ ನೋವಿನಾಯಕವಾಗಿದೆ,” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸೈನಿಕ ಗುರಪ್ಪಾ ಮಗದುಮ್ ಅವರು, “ಯೋಧರು ದೇಶಕ್ಕಾಗಿ ಜೀವಪಣ ತೊಡಗುತ್ತಾರೆ. ಅವರ ಸೇವೆಗೆ ಗೌರವ ಕೊಡಬೇಕಾದಲ್ಲಿ, ಪೋಲಿಸರಿಂದ ಈ ರೀತಿಯ ವರ್ತನೆ ನಾಚಿಕೆಗೇಡಿನ ಸಂಗತಿ. ಘಟನೆಯನ್ನು ಖಂಡಿಸುತ್ತೇವೆ. ಪೋಲಿಸರು ಬಹಿರಂಗ ಕ್ಷಮೆಯಾಚಿಸಿದ್ದರಿಂದ ನಾವು ಮುತ್ತಿಗೆ ಹಿಂಪಡೆಯಲು ನಿರ್ಧರಿಸಿದ್ದೇವೆ,” ಎಂದು ತಿಳಿಸಿದರು.
ಈ ಘಟನೆಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಪೊಲೀಸರ ವರ್ತನೆಗೆ ವಿರೋಧ ವ್ಯಕ್ತಪಡಿಸುವ ಧ್ವನಿಗಳು ಮೂಡಿಬಂದಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…