Latest

ಮಾಜಿ ಸೈನಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಡು ರಸ್ತೆಯಲ್ಲಿ ಹಲ್ಲೆ ಮಾಡಿದ ಪೊಲೀಸರು.

ಹಲ್ಯಾಳ: ಪಟ್ಟಣದ ಶಿವಯೋಗಿ ವೃತ್ತದಲ್ಲಿ ರಸ್ತೆ ಬದಿ ವಾಹನದೊಂದಿಗೆ ನಿಂತಿದ್ದ ಸೈನಿಕನಿಗೆ ಪೋಲಿಸರಿಂದ ಅವಮಾನಕಾರಿ ವರ್ತನೆ ನಡೆಯಿತು. ಅಪರಿಚಿತ ಕಾರಣಕ್ಕಾಗಿ ಪೊಲೀಸರು ಯೋಧನೊಂದಿಗೆ ಏಕವಚನದಲ್ಲಿ ಮಾತನಾಡಿದ ಸಂದರ್ಭ, ಯೋಧನು “ಗೌರವದಿಂದ ಮಾತನಾಡಿ” ಎಂದು ವಿನಂತಿಸಿದಾಗ ವಾಗ್ವಾದವು ಉಲ್ಬಣಗೊಂಡಿತು.

ಸಮಾಲೋಚನೆಯಿಂದ ಮುಂದೆ ಪೊಲೀಸ್ ಅಧಿಕಾರಿಗಳು ಸೈನಿಕ ಮಲ್ಲಿಕಾರ್ಜುನ ಪಾಟೀಲ ಅವರನ್ನು ನಡುರಸ್ತೆಯಲ್ಲೇ ಥಳಿಸಿ, ಬಳಿಕ ಠಾಣೆಗೆ ಕರೆದುಕೊಂಡು ಹೋಗಿ ಮತ್ತೆ ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಯ ವಿಡಿಯೋಗಳು ಮತ್ತು ಸ್ಥಳೀಯರ ಪ್ರತಿಕ್ರಿಯೆಗಳಿಂದ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಯಿತು.

ಈ ಘಟನೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಸೈನಿಕರ ಸಂಘದ ಸದಸ್ಯರು ಮತ್ತು ಸ್ಥಳೀಯರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ, ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ, ಹಲ್ಲೆಗೊಳಗಾದ ಸೈನಿಕನಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದರು.

ಘಟನೆಯ ಕುರಿತು ಪ್ರತಿಕ್ರಿಯೆ:
ಘಟನೆಗೆ ಪ್ರತಿಕ್ರಿಯಿಸಿದ ಯೋಧ ಮಲ್ಲಿಕಾರ್ಜುನ ಪಾಟೀಲ, “ನಾವು ದೇಶದ ರಕ್ಷಣೆಗಾಗಿ ಸೇವೆ ಮಾಡುತ್ತೇವೆ. ಆದರೆ ಸ್ಥಳೀಯ ಮಟ್ಟದಲ್ಲಿ ನಮಗೆ ಅಗೌರವ ತೋರಿದ ಘಟನೆ ನೋವಿನಾಯಕವಾಗಿದೆ,” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸೈನಿಕ ಗುರಪ್ಪಾ ಮಗದುಮ್ ಅವರು, “ಯೋಧರು ದೇಶಕ್ಕಾಗಿ ಜೀವಪಣ ತೊಡಗುತ್ತಾರೆ. ಅವರ ಸೇವೆಗೆ ಗೌರವ ಕೊಡಬೇಕಾದಲ್ಲಿ, ಪೋಲಿಸರಿಂದ ಈ ರೀತಿಯ ವರ್ತನೆ ನಾಚಿಕೆಗೇಡಿನ ಸಂಗತಿ. ಘಟನೆಯನ್ನು ಖಂಡಿಸುತ್ತೇವೆ. ಪೋಲಿಸರು ಬಹಿರಂಗ ಕ್ಷಮೆಯಾಚಿಸಿದ್ದರಿಂದ ನಾವು ಮುತ್ತಿಗೆ ಹಿಂಪಡೆಯಲು ನಿರ್ಧರಿಸಿದ್ದೇವೆ,” ಎಂದು ತಿಳಿಸಿದರು.

ಈ ಘಟನೆಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಪೊಲೀಸರ ವರ್ತನೆಗೆ ವಿರೋಧ ವ್ಯಕ್ತಪಡಿಸುವ ಧ್ವನಿಗಳು ಮೂಡಿಬಂದಿವೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago