Categories: CrimeLatest

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಬುಧವಾರ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದೆ.

ಮುದಗಲ್ ಸಮೀಪದ ಜವಾಹರ್ ನವೋದಯ ಶಾಲೆ ಕಾಂಪೌಂಡ್ ಹತ್ತಿರದ ರೇಷ್ಮೆ ತಾಂಡದ ಕಚ್ಚಾ ರಸ್ತೆಯಲ್ಲಿ ಬೈಕ್ ಮೂಲಕ ಅಕ್ರಮವಾಗಿ ಕಳ್ಳಭಟ್ಟಿ ಸರಾಯಿ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. ಈ ಕಾರ್ಯಾಚರಣೆಗೆ ವೃತ್ತ ನಿರೀಕ್ಷಕಿ ಲಕ್ಷ್ಮಿದೇವಿ ನೇತೃತ್ವ ವಹಿಸಿದ್ದರು.

ದಾಳಿ ವೇಳೆ ಬಜಾಜ್ ಪಲ್ಸರ್-125 ದ್ವಿಚಕ್ರ ವಾಹನವನ್ನು ತಪಾಸಣೆ ನಡೆಸಿದ ಅಧಿಕಾರಿಗಳು, ಸುಮಾರು 4 ಲೀಟರ್ ಕಳ್ಳಭಟ್ಟಿ ಸರಾಯಿ ಪತ್ತೆಹಚ್ಚಿದರು. ಈ ಸಂಬಂಧ ಮರಿಯಮ್ಮನಹಳ್ಳಿ ಗ್ರಾಮದ ರಾಜು (ತಂದೆ: ಮರಿಯಪ್ಪ), ಮತಿಹಾಸ (ತಂದೆ: ಬಾಲಪ್ಪ ಉಯ್ಯಾಲ) ಹಾಗೂ ದೇಶಪ್ಪ (ತಂದೆ: ಬಸ್ತನಪ್ಪ) ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆ ಕರ್ನಾಟಕದ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಕೇಂದ್ರ ಬೆಳಗಾವಿ ಅವರ ಆದೇಶದಂತೆ, ಕಲಬುರ್ಗಿ ವಿಭಾಗದ ಜಂಟಿ ಆಯುಕ್ತರು, ರಾಯಚೂರು ಜಿಲ್ಲೆಯ ಉಪ ಆಯುಕ್ತರು ಮತ್ತು ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ಪಂಚರ ಸಮಕ್ಷಮ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದಲ್ಲಿ ಬಳಸಿದ ವಾಹನದ ಮಾಲೀಕನ ಪತ್ತೆಗೆ ಮುಂದಿನ ತನಿಖೆ ನಡೆಯುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಬಸವರಾಜ್, ಸಿಬ್ಬಂದಿಗಳಾದ ಮಂಜುನಾಥ್ ಹಾಗೂ ಮುಖ್ಯಪೇದೆ ಅಮರೇಶ್ ಸೇರಿದಂತೆ ಗೃಹರಕ್ಷಕ ದಳದ ಸಿಬ್ಬಂದಿಗಳು ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

14 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

14 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

14 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

14 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

14 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

14 hours ago