ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಮದ್ಯದ ಸಾಗಾಟವನ್ನು ಪತ್ತೆ ಹಚ್ಚಿ, ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಗೋವಾ ಕಡೆಗೆ ಸಾಗಿಸುತ್ತಿದ್ದ 40,000 ಲೀಟರ್ ಸ್ಪಿರಿಟ್ನ್ನು ವಶಕ್ಕೆ ಪಡೆಯಲಾಗಿದೆ.
ನಂಬರ್ ಪ್ಲೇಟ್ ಬದಲಿಸಿ ತಪ್ಪಿಸಿಕೊಳ್ಳಲು ಯತ್ನ
ಬಂಧಿತ ಓಂ ಪ್ರಕಾಶ್, ಕಳೆದ ಆರು ತಿಂಗಳಿಂದ ಅಕ್ರಮವಾಗಿ ಟ್ಯಾಂಕರ್ ಮೂಲಕ ಸ್ಪಿರಿಟ್ ಸಾಗಿಸುತ್ತಿದ್ದ ಎನ್ನಲಾಗುತ್ತಿದೆ. ಅಧಿಕಾರಿಗಳಿಗೆ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಬದಲಿಸುವ ತಂತ್ರ ಬಳಕೆ ಮಾಡಿದ್ದರೂ, ಈ ಬಾರಿ ಅದೃಷ್ಟ ಕೈಕೊಟ್ಟಿದೆ. ಮಾಹಿತಿ ಪಡೆದು ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, 24 ಲಕ್ಷ ಮೌಲ್ಯದ ಸ್ಪಿರಿಟ್ ಮತ್ತು 55 ಲಕ್ಷ ಮೌಲ್ಯದ ಟ್ಯಾಂಕರ್ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.
ಮಾಲೀಕರಿಗೂ ಪ್ರಕರಣ
ಈ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಟ್ಯಾಂಕರ್ ಮಾಲೀಕ ಸುಖದೇವ್ ವಿರುದ್ಧವೂ ದೂರು ದಾಖಲಿಸಲಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದ್ದು, ಅಕ್ರಮ ಮದ್ಯದ ಸಾಗಾಟದ ಹೆಚ್ಚಿನ ಜಾಲವಿದೆ ಎಂದೇ ಅನುಮಾನ ವ್ಯಕ್ತವಾಗಿದೆ.
ಅಬಕಾರಿ ಇಲಾಖೆ ಮತ್ತಷ್ಟು ತನಿಖೆ ನಡೆಸಿ, ಅಕ್ರಮ ಮದ್ಯ ಮಾರಾಟದ ಕೊಂಡಿಗಳನ್ನು ಪತ್ತೆ ಮಾಡುವ ನಿರೀಕ್ಷೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…