Latest

ಹಾಲಳ್ಳಿ ಗ್ರಾಮದಲ್ಲಿ ಅಬಕಾರಿ ದಾಳಿ: 4.05 ಲೀಟರ್ ಅಕ್ರಮ ಮಧ್ಯ ಜಪ್ತಿ, ಆರೋಪಿ ನ್ಯಾಯಾಲಯಕ್ಕೆ ಹಾಜರು

ಇಂಡಿ, ಜೂನ್ 12: ಇಂಡಿ ವಲಯದ ಚಡಚಣ ತಾಲೂಕಿನ ಹಾಲಳ್ಳಿ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 4.05 ಲೀಟರ್ ಅಕ್ರಮವಾಗಿ ಸಂಗ್ರಹಿಸಿದ ಮಧ್ಯವನ್ನು ಜಪ್ತಿ ಮಾಡಲಾಗಿದೆ. ಈ ದಾಳಿ ಜೂನ್ 12ರಂದು ಮಧ್ಯಾಹ್ನ 1:50ಕ್ಕೆ ನಡೆದಿದ್ದು, ಶಬ್ಬೀರ್ ಮೊಲಾಸಾಬ್ ಮುಲ್ಲಾ ಎಂಬುವರ ನಿವಾಸದಲ್ಲಿ ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ.

ಆರೋಪಿ ಶಬ್ಬೀರ್ ಮೊಲಾಸಾಬ್ ಮುಲ್ಲಾ (ಸಾ. ಹಾಲಳ್ಳಿ) ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಇಂಡಿ ವಲಯದ ಅಬಕಾರಿ ನಿರೀಕ್ಷಕರಾದ ರಾಹುಲ್ ಎಸ್. ನಾಯಕ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನೀಡಿದ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕ ವಾದಿರಾಜ್ ಎನ್. ಆಶ್ರಿತ್ ಅವರು ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಈ ದಾಳಿಯಲ್ಲಿ ಅಬಕಾರಿ ಸಿಬ್ಬಂದಿಯಾದ ಅಶೋಕ್ ಎಸ್. ಗೊಣಸಗಿ, ಶಿವಾನಂದ ಎಸ್. ಕೊಡತೆ, ಮಂಜುನಾಥ್ ಬಡಿಗೇರ್, ಬಸವಂತ ಬೈರಗೊಂಡ, ಮಲ್ಲಪ್ಪ ಬಿರಾದಾರ್ ಹಾಗೂ ಲಾಳೇಮಶಾಕ್ ಮಸಳಿ ಭಾಗವಹಿಸಿದ್ದರು.

ಅಬಕಾರಿ ಇಲಾಖೆ ವಿರುದ್ಧ ಶಕ್ತಿಯುತ ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ದಾಳಿಗಳು ಮುಂದುವರೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

6 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

12 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

12 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

12 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

12 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

12 hours ago