ಇಂಡಿ, ಜೂನ್ 12: ಇಂಡಿ ವಲಯದ ಚಡಚಣ ತಾಲೂಕಿನ ಹಾಲಳ್ಳಿ ಗ್ರಾಮದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ 4.05 ಲೀಟರ್ ಅಕ್ರಮವಾಗಿ ಸಂಗ್ರಹಿಸಿದ ಮಧ್ಯವನ್ನು ಜಪ್ತಿ ಮಾಡಲಾಗಿದೆ. ಈ ದಾಳಿ ಜೂನ್ 12ರಂದು ಮಧ್ಯಾಹ್ನ 1:50ಕ್ಕೆ ನಡೆದಿದ್ದು, ಶಬ್ಬೀರ್ ಮೊಲಾಸಾಬ್ ಮುಲ್ಲಾ ಎಂಬುವರ ನಿವಾಸದಲ್ಲಿ ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ.
ಆರೋಪಿ ಶಬ್ಬೀರ್ ಮೊಲಾಸಾಬ್ ಮುಲ್ಲಾ (ಸಾ. ಹಾಲಳ್ಳಿ) ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಇಂಡಿ ವಲಯದ ಅಬಕಾರಿ ನಿರೀಕ್ಷಕರಾದ ರಾಹುಲ್ ಎಸ್. ನಾಯಕ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ನೀಡಿದ ಅಬಕಾರಿ ನಿರೀಕ್ಷಕರು, ಉಪ ನಿರೀಕ್ಷಕ ವಾದಿರಾಜ್ ಎನ್. ಆಶ್ರಿತ್ ಅವರು ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಈ ದಾಳಿಯಲ್ಲಿ ಅಬಕಾರಿ ಸಿಬ್ಬಂದಿಯಾದ ಅಶೋಕ್ ಎಸ್. ಗೊಣಸಗಿ, ಶಿವಾನಂದ ಎಸ್. ಕೊಡತೆ, ಮಂಜುನಾಥ್ ಬಡಿಗೇರ್, ಬಸವಂತ ಬೈರಗೊಂಡ, ಮಲ್ಲಪ್ಪ ಬಿರಾದಾರ್ ಹಾಗೂ ಲಾಳೇಮಶಾಕ್ ಮಸಳಿ ಭಾಗವಹಿಸಿದ್ದರು.
ಅಬಕಾರಿ ಇಲಾಖೆ ವಿರುದ್ಧ ಶಕ್ತಿಯುತ ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ದಾಳಿಗಳು ಮುಂದುವರೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…