Latest

ಕರಿಕೆ ಗ್ರಾಮದಲ್ಲಿ ಅಬಕಾರಿ ದಾಳಿ: ಕಳ್ಳಭಟ್ಟಿ ಮತ್ತು ಪುಳಗಂಜಿ ವಶ

ಸಪ್ತಾಪದಿ ತಾಲ್ಲೂಕಿನ ಕರಿಕೆ ಗ್ರಾಮದ ಕರಿಬಳಪು ಎಂಬಲ್ಲಿ ಅಬಕಾರಿ ಅಧಿಕಾರಿಗಳ ತಂಡವು ಮೂರು ಸ್ಥಳಗಳಲ್ಲಿ ದಾಳಿ ನಡೆಸಿ, ಒಟ್ಟು 5.5 ಲೀಟರ್ ಕಳ್ಳಭಟ್ಟಿ, 100 ಲೀಟರ್ ಪುಳಗಂಜಿ ಹಾಗೂ ಭಟ್ಟಿಇಳಿಸುವ ಪರಿಕರಗಳನ್ನು ವಶಪಡಿಸಿಕೊಂಡಿದೆ.

ದಾಳಿಯ ವಿವರ:

ರಾರು ಎಂಬುವವರ ಮನೆಯಲ್ಲಿ 1 ಲೀಟರ್ ಕಳ್ಳಭಟ್ಟಿ, 25 ಲೀಟರ್ ಪುಳಗಂಜಿ ಹಾಗೂ ಕಳ್ಳಭಟ್ಟಿಗಾಗಿ ಬಳಸುತ್ತಿದ್ದ ಪರಿಕರಗಳು ಪತ್ತೆಯಾಗಿವೆ.

ರಮೇಶ್ ಎಂಬುವವರ ಮನೆಯಲ್ಲಿ 0.5 ಲೀಟರ್ ಕಳ್ಳಭಟ್ಟಿ, 50 ಲೀಟರ್ ಪುಳಗಂಜಿ ಮತ್ತು ಭಟ್ಟಿಇಳಿಸುವ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಪ್ಪ ಎಂಬುವವರ ಮನೆಯಲ್ಲಿ 4 ಲೀಟರ್ ಕಳ್ಳಭಟ್ಟಿ, 25 ಲೀಟರ್ ಪುಳಗಂಜಿ ಮತ್ತು ಭಟ್ಟಿಇಳಿಸುವ ಪರಿಕರಗಳು ಪತ್ತೆಯಾಗಿವೆ.

ಅಬಕಾರಿ ಇನ್‌ಸ್ಪೆಕ್ಟರ್ ವಿ.ಸ್ವರ್ಣಶ್ರೀ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸಬ್‌ಇನ್‌ಸ್ಪೆಕ್ಟರ್ ಬಿ.ಎಸ್.ಬಾಲಕೃಷ್ಣ, ಹೆಡ್‌ಕಾನ್‌ಸ್ಟೆಬಲ್ ಕೆ.ಬಿ.ರಾಜೇಂದ್ರ, ಕಾನ್‌ಸ್ಟೆಬಲ್‌ಗಳಾದ ಎಚ್.ಎ.ರಾಜು, ಡಿ.ಎಸ್.ಮೊಹನ್ ಕುಮಾರ್ ಹಾಗೂ ವಾಹನ ಚಾಲಕ ನಿತಿನ್ ವೈ ಭಾಗವಹಿಸಿದ್ದರು.

ಅಬಕಾರಿ ಅಧಿಕಾರಿಗಳ ಪ್ರಕಾರ, ಕಳ್ಳಭಟ್ಟಿಯ ತಯಾರಣೆ ಮತ್ತು ವಿತರಣೆ ತಡೆಯಲು ನಿಯಮಿತವಾಗಿ ದಾಳಿಗಳನ್ನು ಮುಂದುವರಿಸಲಾಗುವುದು. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಮರ್ಪಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

nazeer ahamad

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

52 minutes ago

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…

56 minutes ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

7 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

11 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

11 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

12 hours ago