Latest

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: : ಪೊಲೀಸ್ ಅಧಿಕಾರಿ ಸಹಕರಿಸಿದ್ದಾರಾ?”

ಬೆಂಗಳೂರು, ಜುಲೈ 30 – ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಕುರಿತು ಶಾಕ್ ನೀಡಿದ ಪೈಶಾಚಿಕ ಪ್ರಕಾರಣೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಕುರಿತಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗ ತನಿಖೆಗೆ ವೇಗ ನೀಡಿದ್ದು, ಗುರುತಿಸಲಾದ ಸ್ಥಳಗಳಲ್ಲಿ ಉತ್ಖನನ ಕಾರ್ಯ ಪ್ರಾರಂಭವಾಗಿದೆ.

ಪ್ರಾಥಮಿಕ ಮಾಹಿತಿ ನೀಡಿದ್ದ ದೂರುದಾರ ವ್ಯಕ್ತಿ, ತಾನು 13ಕ್ಕೂ ಹೆಚ್ಚು ಸ್ಥಳಗಳಲ್ಲಿ ಶವಗಳನ್ನು ಹೂತಿದ್ದೇನೆ ಎಂದು ಎಸ್‌ಐಟಿಗೆ ಮಾಹಿತಿ ನೀಡಿದ್ದಾನೆ. ಈ ನಿಟ್ಟಿನಲ್ಲಿ ಮಂಗಳವಾರದಿಂದಲೇ ವಿವಿಧ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ಆರಂಭವಾಗಿದೆ. ಇಂದೂ ಎರಡನೇ ದಿನದ ಉತ್ಖನನ ಕಾರ್ಯ ನಡೆಯುತ್ತಿದ್ದು, ಅಧಿಕಾರಿಗಳ ನಿರೀಕ್ಷೆಯಂತೆ ಶವಗಳ ಅಸ್ತಿತ್ವ ಪತ್ತೆಯಾಗಬಹುದು ಎಂಬ ನಿರೀಕ್ಷೆ ಮುಂದುವರೆದಿದೆ.

ಉತ್ಖನನ ಕಾರ್ಯಕ್ಕೆ ಡಿಐಜಿ ಅನುಚೇತ್, ಎಸಿ ಸ್ಟೆಲ್ಲಾ ವರ್ಗೀಸ್ ಹಾಗೂ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವ ನೀಡುತ್ತಿದ್ದಾರೆ. ಒಟ್ಟು 20 ಕಾರ್ಮಿಕರು ಶ್ರಮಿಸುತ್ತಿದ್ದು, ಇಂದಿನ ಶೋಧ ಕಾರ್ಯವನ್ನು ಎರಡು ಪಾಯಿಂಟ್‌ಗಳಲ್ಲಿ ಸಮಾಂತರವಾಗಿ ನಡೆಸಲಾಗುತ್ತಿದೆ. ಹೆಚ್ಚಿನ ಸ್ಥಳಗಳಲ್ಲಿ ಹಿಟಾಚಿ ಯಂತ್ರದ ಸಹಾಯದಿಂದ ಮಣ್ಣು ತೆಗೆದು ಹಾಕಲಾಗುತ್ತಿದೆ.

ಆದರೆ 2ರಿಂದ 8ನೇ ಪಾಯಿಂಟ್‌ಗಳವರೆಗೆ ಗುರುತಿಸಲಾದ ಪ್ರದೇಶಗಳು ಅರಣ್ಯ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಇಲಾಖೆವು ಯಂತ್ರೋಪಕರಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಉತ್ಖನನ ಕಾರ್ಯ ನಿರೀಕ್ಷಿತ ಗತಿಯಲ್ಲಿ ಸಾಗುತ್ತಿಲ್ಲ. ಕಡು ಅಡವಿಯಿಂದ ಕೂಡಿರುವ ಈ ಪ್ರದೇಶಗಳಲ್ಲಿ ಕೈಗೆಟುಕುವ ಕಾರ್ಯವಿಧಾನಗಳನ್ನು ರೂಪಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ನಡುವೆ ಮತ್ತೊಂದು ಘೋರ ವಿವರಣೆ ಬಯಲಾಗಿದ್ದು, ದೂರುದಾರ ತನ್ನ ಬಳಿ ಶವ ಹೂಳಲು ಒಬ್ಬ ಪೊಲೀಸ್ ಅಧಿಕಾರಿ ಸಹಕರಿಸಿದ್ದಾನೆ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ, 1995ರಿಂದ ಧರ್ಮಸ್ಥಳ ಔಟ್‌ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಅಧಿಕಾರಿಗಳ ಪಟ್ಟಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದೆ.

ಇನ್ನು ತನಿಖೆ ಇನ್ನಷ್ಟು ಆಳತೆಗೆ ಹೋಗುವ ಸೂಚನೆಗಳಿದ್ದು, ಶವಗಳ ಪತ್ತೆ, ಸಹಕರಿಸಿದ್ದ ಎನ್ನಲಾದ ಅಧಿಕಾರಿಗಳ ಧೂರ್ತತೆ ಬಹಿರಂಗಗೊಳಿಸುವಂತಿರುವ ಈ ಪ್ರಕರಣ ರಾಜ್ಯದ ಇತಿಹಾಸದಲ್ಲೇ ಭೀಕರ ಅಧ್ಯಾಯವಾಗಿ ಮೂಡಿಬರುತ್ತಿದೆ.

nazeer ahamad

Recent Posts

“ರಾಕ್ಷಸೀ ಕೃತ್ಯ: ಪ್ರೇಮದ ಹೆಸರಿನಲ್ಲಿ ಮಹಿಳೆಯ ಹತ್ಯೆ, ಬಳಿಕ ಖಾಸಗಿ ಭಾಗ ಹರಿದು ಕರುಳು ಹೊರತೆಗೆದ ಕ್ರೂರಿ!”

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನರ್ಬಯಾ ಪ್ರಕರಣವನ್ನು ನೆನಪಿಸುವಂತೆಯೇ ಒಂದು ಹೃದಯವಿದ್ರಾವಕ ಅಪರಾಧ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಪ್ರೇಮಿಕೆಯನ್ನು…

9 hours ago

40 ವರ್ಷದ ವ್ಯಕ್ತಿಯ ಜೊತೆ 13 ವರ್ಷದ ಬಾಲಕಿಯ ಮದುವೆ.!

ಹೈದರಾಬಾದ್, ಜುಲೈ 31: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಸಂಸ್ಕೃತಿಯ ಕುರಿತಂತೆ ಆತಂಕ ಹೆಚ್ಚಿಸುವ ಘಟನೆ ಬೆಳಕಿಗೆ ಬಂದಿದೆ. ಕೇವಲ…

10 hours ago

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಶುಂಠಿ,ಮಾವು,ಅಡಿಕೆಗೆ ಅವಕಾಶ

ಮುಂಡಗೋಡ: ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2025 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ…

10 hours ago

ಪೈಪ್ ನಲ್ಲಿ ಸಿಕ್ಕಿಕೊಂಡಿದ್ದ ನಾಗರ ಹಾವನ್ನು ರಕ್ಷಿಸಿದ ಗಸ್ತು ವನಪಾಲಕ ಮುತ್ತುರಾಜ

ಮುಂಡಗೋಡ: ತಾಲೂಕಿನ ಕಾತೂರ ವಲಯದ ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಹೊಲದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು…

10 hours ago

ಸಿನಿಮಾ ಕ್ಷೇತ್ರದಲ್ಲಿ ಬಿರುಕು ಬಿಡಬೇಡಿ: ರಮ್ಯಾ–ದರ್ಶನ್ ಅಭಿಮಾನಿ ವಿವಾದಕ್ಕೆ ರಾಕ್‌ಲೈನ್ ವೆಂಕಟೇಶ್ ಗಂಭೀರ ಎಚ್ಚರಿಕೆ”

ಬೆಂಗಳೂರು – ನಟಿ ರಮ್ಯಾ ಮತ್ತು ನಟ ದರ್ಶನ್ ಅವರ ಅಭಿಮಾನಿಗಳ ನಡುವಿನ ಸಾಮಾಜಿಕ ಮಾಧ್ಯಮ ಜಟಾಪಟಿಗೆ ಸಂಬಂಧಿಸಿದಂತೆ ಇದೀಗ…

11 hours ago

ಅಭಿಮಾನಿಗಳ ಮಾತಿಗೆ ಸಂಯಮ ತರಲು ದರ್ಶನ್ ಜೊತೆ ಮಾತನಾಡುತ್ತೇನೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ”

ಮಂಡ್ಯ, ಜುಲೈ 31: "ನಟ ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೇಜವಾಬ್ದಾರಿತನದ ಮೂಲಕ ಕೆಟ್ಟ ಕಾಮೆಂಟ್‌ಗಳು ಮಾಡುತ್ತಿರುವುದು ಅನಾವಶ್ಯಕ.…

12 hours ago