Latest

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: : ಪೊಲೀಸ್ ಅಧಿಕಾರಿ ಸಹಕರಿಸಿದ್ದಾರಾ?”

ಬೆಂಗಳೂರು, ಜುಲೈ 30 – ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಕುರಿತು ಶಾಕ್ ನೀಡಿದ ಪೈಶಾಚಿಕ ಪ್ರಕಾರಣೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಕುರಿತಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗ ತನಿಖೆಗೆ ವೇಗ ನೀಡಿದ್ದು, ಗುರುತಿಸಲಾದ ಸ್ಥಳಗಳಲ್ಲಿ ಉತ್ಖನನ ಕಾರ್ಯ ಪ್ರಾರಂಭವಾಗಿದೆ.

ಪ್ರಾಥಮಿಕ ಮಾಹಿತಿ ನೀಡಿದ್ದ ದೂರುದಾರ ವ್ಯಕ್ತಿ, ತಾನು 13ಕ್ಕೂ ಹೆಚ್ಚು ಸ್ಥಳಗಳಲ್ಲಿ ಶವಗಳನ್ನು ಹೂತಿದ್ದೇನೆ ಎಂದು ಎಸ್‌ಐಟಿಗೆ ಮಾಹಿತಿ ನೀಡಿದ್ದಾನೆ. ಈ ನಿಟ್ಟಿನಲ್ಲಿ ಮಂಗಳವಾರದಿಂದಲೇ ವಿವಿಧ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ಆರಂಭವಾಗಿದೆ. ಇಂದೂ ಎರಡನೇ ದಿನದ ಉತ್ಖನನ ಕಾರ್ಯ ನಡೆಯುತ್ತಿದ್ದು, ಅಧಿಕಾರಿಗಳ ನಿರೀಕ್ಷೆಯಂತೆ ಶವಗಳ ಅಸ್ತಿತ್ವ ಪತ್ತೆಯಾಗಬಹುದು ಎಂಬ ನಿರೀಕ್ಷೆ ಮುಂದುವರೆದಿದೆ.

ಉತ್ಖನನ ಕಾರ್ಯಕ್ಕೆ ಡಿಐಜಿ ಅನುಚೇತ್, ಎಸಿ ಸ್ಟೆಲ್ಲಾ ವರ್ಗೀಸ್ ಹಾಗೂ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವ ನೀಡುತ್ತಿದ್ದಾರೆ. ಒಟ್ಟು 20 ಕಾರ್ಮಿಕರು ಶ್ರಮಿಸುತ್ತಿದ್ದು, ಇಂದಿನ ಶೋಧ ಕಾರ್ಯವನ್ನು ಎರಡು ಪಾಯಿಂಟ್‌ಗಳಲ್ಲಿ ಸಮಾಂತರವಾಗಿ ನಡೆಸಲಾಗುತ್ತಿದೆ. ಹೆಚ್ಚಿನ ಸ್ಥಳಗಳಲ್ಲಿ ಹಿಟಾಚಿ ಯಂತ್ರದ ಸಹಾಯದಿಂದ ಮಣ್ಣು ತೆಗೆದು ಹಾಕಲಾಗುತ್ತಿದೆ.

ಆದರೆ 2ರಿಂದ 8ನೇ ಪಾಯಿಂಟ್‌ಗಳವರೆಗೆ ಗುರುತಿಸಲಾದ ಪ್ರದೇಶಗಳು ಅರಣ್ಯ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಇಲಾಖೆವು ಯಂತ್ರೋಪಕರಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಉತ್ಖನನ ಕಾರ್ಯ ನಿರೀಕ್ಷಿತ ಗತಿಯಲ್ಲಿ ಸಾಗುತ್ತಿಲ್ಲ. ಕಡು ಅಡವಿಯಿಂದ ಕೂಡಿರುವ ಈ ಪ್ರದೇಶಗಳಲ್ಲಿ ಕೈಗೆಟುಕುವ ಕಾರ್ಯವಿಧಾನಗಳನ್ನು ರೂಪಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ನಡುವೆ ಮತ್ತೊಂದು ಘೋರ ವಿವರಣೆ ಬಯಲಾಗಿದ್ದು, ದೂರುದಾರ ತನ್ನ ಬಳಿ ಶವ ಹೂಳಲು ಒಬ್ಬ ಪೊಲೀಸ್ ಅಧಿಕಾರಿ ಸಹಕರಿಸಿದ್ದಾನೆ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ, 1995ರಿಂದ ಧರ್ಮಸ್ಥಳ ಔಟ್‌ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಅಧಿಕಾರಿಗಳ ಪಟ್ಟಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದೆ.

ಇನ್ನು ತನಿಖೆ ಇನ್ನಷ್ಟು ಆಳತೆಗೆ ಹೋಗುವ ಸೂಚನೆಗಳಿದ್ದು, ಶವಗಳ ಪತ್ತೆ, ಸಹಕರಿಸಿದ್ದ ಎನ್ನಲಾದ ಅಧಿಕಾರಿಗಳ ಧೂರ್ತತೆ ಬಹಿರಂಗಗೊಳಿಸುವಂತಿರುವ ಈ ಪ್ರಕರಣ ರಾಜ್ಯದ ಇತಿಹಾಸದಲ್ಲೇ ಭೀಕರ ಅಧ್ಯಾಯವಾಗಿ ಮೂಡಿಬರುತ್ತಿದೆ.

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

10 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

10 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

13 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

14 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

15 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

15 hours ago