Latest

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ರೋಚಕ ಟ್ವಿಸ್ಟ್: : ಪೊಲೀಸ್ ಅಧಿಕಾರಿ ಸಹಕರಿಸಿದ್ದಾರಾ?”

ಬೆಂಗಳೂರು, ಜುಲೈ 30 – ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟಿರುವ ಕುರಿತು ಶಾಕ್ ನೀಡಿದ ಪೈಶಾಚಿಕ ಪ್ರಕಾರಣೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಕುರಿತಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಈಗ ತನಿಖೆಗೆ ವೇಗ ನೀಡಿದ್ದು, ಗುರುತಿಸಲಾದ ಸ್ಥಳಗಳಲ್ಲಿ ಉತ್ಖನನ ಕಾರ್ಯ ಪ್ರಾರಂಭವಾಗಿದೆ.

ಪ್ರಾಥಮಿಕ ಮಾಹಿತಿ ನೀಡಿದ್ದ ದೂರುದಾರ ವ್ಯಕ್ತಿ, ತಾನು 13ಕ್ಕೂ ಹೆಚ್ಚು ಸ್ಥಳಗಳಲ್ಲಿ ಶವಗಳನ್ನು ಹೂತಿದ್ದೇನೆ ಎಂದು ಎಸ್‌ಐಟಿಗೆ ಮಾಹಿತಿ ನೀಡಿದ್ದಾನೆ. ಈ ನಿಟ್ಟಿನಲ್ಲಿ ಮಂಗಳವಾರದಿಂದಲೇ ವಿವಿಧ ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ಆರಂಭವಾಗಿದೆ. ಇಂದೂ ಎರಡನೇ ದಿನದ ಉತ್ಖನನ ಕಾರ್ಯ ನಡೆಯುತ್ತಿದ್ದು, ಅಧಿಕಾರಿಗಳ ನಿರೀಕ್ಷೆಯಂತೆ ಶವಗಳ ಅಸ್ತಿತ್ವ ಪತ್ತೆಯಾಗಬಹುದು ಎಂಬ ನಿರೀಕ್ಷೆ ಮುಂದುವರೆದಿದೆ.

ಉತ್ಖನನ ಕಾರ್ಯಕ್ಕೆ ಡಿಐಜಿ ಅನುಚೇತ್, ಎಸಿ ಸ್ಟೆಲ್ಲಾ ವರ್ಗೀಸ್ ಹಾಗೂ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವ ನೀಡುತ್ತಿದ್ದಾರೆ. ಒಟ್ಟು 20 ಕಾರ್ಮಿಕರು ಶ್ರಮಿಸುತ್ತಿದ್ದು, ಇಂದಿನ ಶೋಧ ಕಾರ್ಯವನ್ನು ಎರಡು ಪಾಯಿಂಟ್‌ಗಳಲ್ಲಿ ಸಮಾಂತರವಾಗಿ ನಡೆಸಲಾಗುತ್ತಿದೆ. ಹೆಚ್ಚಿನ ಸ್ಥಳಗಳಲ್ಲಿ ಹಿಟಾಚಿ ಯಂತ್ರದ ಸಹಾಯದಿಂದ ಮಣ್ಣು ತೆಗೆದು ಹಾಕಲಾಗುತ್ತಿದೆ.

ಆದರೆ 2ರಿಂದ 8ನೇ ಪಾಯಿಂಟ್‌ಗಳವರೆಗೆ ಗುರುತಿಸಲಾದ ಪ್ರದೇಶಗಳು ಅರಣ್ಯ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಇಲಾಖೆವು ಯಂತ್ರೋಪಕರಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಹಿನ್ನೆಲೆಯಲ್ಲಿ ಉತ್ಖನನ ಕಾರ್ಯ ನಿರೀಕ್ಷಿತ ಗತಿಯಲ್ಲಿ ಸಾಗುತ್ತಿಲ್ಲ. ಕಡು ಅಡವಿಯಿಂದ ಕೂಡಿರುವ ಈ ಪ್ರದೇಶಗಳಲ್ಲಿ ಕೈಗೆಟುಕುವ ಕಾರ್ಯವಿಧಾನಗಳನ್ನು ರೂಪಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ನಡುವೆ ಮತ್ತೊಂದು ಘೋರ ವಿವರಣೆ ಬಯಲಾಗಿದ್ದು, ದೂರುದಾರ ತನ್ನ ಬಳಿ ಶವ ಹೂಳಲು ಒಬ್ಬ ಪೊಲೀಸ್ ಅಧಿಕಾರಿ ಸಹಕರಿಸಿದ್ದಾನೆ ಎಂದು ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ, 1995ರಿಂದ ಧರ್ಮಸ್ಥಳ ಔಟ್‌ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿದ ಎಲ್ಲಾ ಅಧಿಕಾರಿಗಳ ಪಟ್ಟಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದೆ.

ಇನ್ನು ತನಿಖೆ ಇನ್ನಷ್ಟು ಆಳತೆಗೆ ಹೋಗುವ ಸೂಚನೆಗಳಿದ್ದು, ಶವಗಳ ಪತ್ತೆ, ಸಹಕರಿಸಿದ್ದ ಎನ್ನಲಾದ ಅಧಿಕಾರಿಗಳ ಧೂರ್ತತೆ ಬಹಿರಂಗಗೊಳಿಸುವಂತಿರುವ ಈ ಪ್ರಕರಣ ರಾಜ್ಯದ ಇತಿಹಾಸದಲ್ಲೇ ಭೀಕರ ಅಧ್ಯಾಯವಾಗಿ ಮೂಡಿಬರುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago