ಮೈಸೂರು, ಜುಲೈ 16: ಮೈಸೂರಿನ ಹೆಸರಾಂತ ಚೆಲುವಾಂಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮುಗಿದ ಆಹಾರ ಪದಾರ್ಥಗಳಿಂದ ತಯಾರಿಸಿದ ಭೋಜನ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪ ಹೊರಬಿದ್ದ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ.
ಅಮಾನತು ಗೊಂಡವರಲ್ಲಿ ಆಸ್ಪತ್ರೆಯ ಲೀಲಾವತಿ ಮತ್ತು ಲಾರೆನ್ಸ್ ಎಂಬ ವೈದ್ಯರು ಇದ್ದಾರೆ. ಈ ನಿರ್ಧಾರವು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಹೆಚ್. ಕೃಷ್ಣ ಅವರ ನೇತೃತ್ವದ ತನಿಖಾ ತಂಡದ ಪತ್ತೆಗಳಿಂದಾಗಿ ತೆಗೆದುಕೊಳ್ಳಲಾಗಿದೆ.
ಹುಳವಿರುವ ರವೆ, ಅವಲಕ್ಕಿ, ಕಡ್ಲೆಬೇಳೆ ಬಳಕೆ ಶಾಕ್ ನೀಡಿದ ಅನುಭವ
ಚೆಲುವಾಂಬ ಆಸ್ಪತ್ರೆಗೆ ಅಚ್ಚಾನೀಯ ಭೇಟಿ ನೀಡಿದ್ದ ಆಯೋಗದ ಅಧ್ಯಕ್ಷರು ಹಾಗೂ ಅವರ ತಂಡ, ಆಸ್ಪತ್ರೆಯ ಅಡುಗೆ ವಿಭಾಗವನ್ನು ಪರಿಶೀಲಿಸಿದಾಗ, ಹುಳ ಕಾಣಿಸಿಕೊಳ್ಳುವ ರವೆ, ಅವಧಿ ಮೀರಿದ ಅವಲಕ್ಕಿ ಮತ್ತು ಕಡ್ಲೆಬೇಳೆ ಸೇರಿದಂತೆ ಹಲವಾರು ಆಹಾರ ಪದಾರ್ಥಗಳು ಬಳಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ರೋಗಿಗಳಿಗೆ ದಿನವೂ ಒಂದೆರೆಡು ಐಟಂಗಳನ್ನು ಮಾತ್ರ ನೀಡಲಾಗುತ್ತಿದ್ದು, ಪೋಷಕಾಂಶದ ಕೊರತೆ ಇದೆ ಎಂಬುದು ಸ್ಪಷ್ಟವಾಗಿದೆ.
ಸ್ಯಾಂಪಲ್ ಲ್ಯಾಬ್ಗೆ: ಇನ್ನಷ್ಟು ಸಿಬ್ಬಂದಿ ಮೇಲೆ ಕ್ರಮ ಸಾಧ್ಯತೆ
ಅವಧಿ ಮೀರಿದ ಆಹಾರ ಪದಾರ್ಥಗಳ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಲಭ್ಯವಾದ ಬಳಿಕ ಇನ್ನಷ್ಟು ಸಿಬ್ಬಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಆಯೋಗದ ಅಧ್ಯಕ್ಷ ಡಾ. ಕೃಷ್ಣ ತಿಳಿಸಿದ್ದಾರೆ.
ಆಸ್ಪತ್ರೆ ಪರಿಸರ ಅಶುಚಿ – ಕುಡಿಯುವ ನೀರಿಗೂ ಕಡಿಮೆ ಆವಕಾಶ
ಅವರ ವರದಿಯಲ್ಲಿ ಚೆಲುವಾಂಬ ಆಸ್ಪತ್ರೆಯ ಸ್ವಚ್ಛತೆಯ ಕೊರತೆ, ಕುಡಿಯುವ ನೀರಿನ ಘಟಕದ ಅಭಾವ, ಹಾಗೂ ನಿರ್ವಹಣೆಯಲ್ಲಿನ ದೌರ್ಬಲ್ಯಗಳ ಬಗ್ಗೆ ಕಠಿಣ ಟೀಕೆ ವ್ಯಕ್ತಪಡಿಸಲಾಗಿದೆ. ಐದು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗೆ ಬಂದರೂ, ಆಸ್ಪತ್ರೆಯ ಆಡಳಿತ ಮಂಡಳಿ ಸಮರ್ಪಕ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಡಾ. ಕೃಷ್ಣ ವಿಷಾದ ವ್ಯಕ್ತಪಡಿಸಿದರು.
ಸಾಂಕೇತಿಕ ಕ್ರಮ – ಪೂರ್ಣ ನ್ಯಾಯ ಇಲ್ಲ
“ಕೇವಲ ಇಬ್ಬರನ್ನು ಅಮಾನತು ಮಾಡಲಾಗಿದೆ. ಆದರೆ ಸಿಬ್ಬಂದಿ ಕೊರತೆಯ ಕಾರಣದಿಂದ ಎಲ್ಲರ ಮೇಲೂ ಕ್ರಮ ಸಾಧ್ಯವಾಗಿಲ್ಲ. ಇದು ಸಾಂಕೇತಿಕ ಕ್ರಮ ಮಾತ್ರ” ಎಂದು ಅವರು ಸ್ಪಷ್ಟಪಡಿಸಿದರು.
ಚೆಲುವಾಂಬ ಆಸ್ಪತ್ರೆಯಲ್ಲಿ ಬಯಲಾದ ಈ ಅವ್ಯವಸ್ಥೆ ವೈದ್ಯಕೀಯ ಸಂಸ್ಥೆಗಳ ವ್ಯವಸ್ಥಾಪನದ ಮೇಲೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಈಗ ಲ್ಯಾಬ್ ವರದಿ ಮತ್ತು ಮುಂದಿನ ಕ್ರಮಗಳತ್ತ ಎಲ್ಲರ ದೃಷ್ಟಿ ಹರಿಸಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…