ಧಾರವಾಡ: ಹನಿಟ್ರ್ಯಾಪ್ ಮೂಲಕ ಹಣ ಸುಲಿಗೆ ಮಾಡಿದ ಚಟುವಟಿಕೆಯಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಘಂಟಿಕೇರಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಂದರೆ ಕೃಷ್ಣಾ ಇಂದರಗಿ, ಸುನೀಲ ಕನ್ನೇಶ್ವರ, ಸತೀಶ್ ಇಂದರಗಿ ಮತ್ತು ಕುಮಾರ್ ಬಿ.ಎಸ್. ಎನ್ನಲಾಗಿದ್ದು, ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪಾಟೀಲ್ ಗಲ್ಲಿಯಲ್ಲಿರುವ ಮಧು ಎಂಬುವವರು ಮಧು ಬೇಕರಿ ನಡೆಸುತ್ತಿದ್ದರು. ಇದೇ ವೇಳೆ ಒಂದು ದಿನ ಯುವತಿಯೋರ್ವಳು ಬೇಕರಿಗೆ ಬಂದು ಮಧುವಿಗೆ ಪರಿಚಯ ಮಾಡಿಕೊಂಡು ಸಲುಗೆ ಬೆಳೆಸಿದ್ದಾಳೆ. ಕಾಲಕ್ರಮೇಣ ಇಬ್ಬರ ನಡುವೆ ಸನ್ನಿಹಿತತೆ ಹೆಚ್ಚಾಗಿದ್ದು, ಮಧು ಕೂಡಾ ಯುವತಿಗೆ ಕಾಲ್ ಮಾಡುತ್ತಿದ್ದನೆಂಬ ಮಾಹಿತಿ ಲಭಿಸಿದೆ.
ಈ ಸಂಬಂಧವಾಗಿ ಮಧುವನ್ನು ಯುವತಿಯ ಗುಂಪು ತನ್ನ ವಶಕ್ಕೆ ತೆಗೆದುಕೊಂಡು ಹಲ್ಲೆಗೊಳಪಡಿಸಿ, ಆತನ ಕುಟುಂಬದಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೊದಲು 50,000 ರೂಪಾಯಿ ಮೊತ್ತವನ್ನು ಫೋನ್ ಪೇ ಮೂಲಕ ಪಡೆದುಕೊಂಡು, ನಂತರದ ದಿನಗಳಲ್ಲಿ ಮತ್ತಷ್ಟು ಹಣವನ್ನು ನೀಡುವಂತೆ ನಿರಂತರ ಬೆದರಿಕೆ ಹಾಕಿದ್ದಾರೆ.
ಈ ಎಲ್ಲಾ ಚಟುವಟಿಕೆಯಿಂದ ತೀವ್ರ ಬಳಲಿದ್ದ ಮಧು ಕುಟುಂಬಸ್ಥರು ಘಂಟಿಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣದ ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರು ಹನಿಟ್ರ್ಯಾಪ್ ಜಾಲವನ್ನು ಪತ್ತೆ ಹಚ್ಚಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಈ ಘಟನೆಯು ನಗರದಲ್ಲಿ ಭಯ ಮತ್ತು ಆತಂಕ ಮೂಡಿಸಿದ್ದು, ಸದ್ಯ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…