Categories: CrimeLatest

ಫೇಕ್ ಅಟ್ರಾಸಿಟಿ ಕೇಸ್ ಆರೋಪ: ಮನನೊಂದು ವಿಷ ಸೇವಿಸಿದ ವ್ಯಾಪಾರಿ ಸಾವು, ಹಲವು ಮಂದಿ ಪೊಲೀಸರ ವಶಕ್ಕೆ

ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಾಪಣ್ಣ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾವಿಗೆ ಮುನ್ನ ವಿಡಿಯೋ ಸಂದೇಶ ದಾಖಲಿಸಿ ಕೆಲವು ಮಂದಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜೋಗಿ ಸೀನಾ, ಪ್ರಶಾಂತ್, ಸಂತೋಷ, ರಾಧಾ ಹಾಗೂ ಲಲಿತ್ ಕುಮಾರ್ ಸೇರಿದಂತೆ ಅವರ ಕುಟುಂಬದವರೇ ನನ್ನ ಸಾವಿಗೆ ಕಾರಣ ಎಂದು ಪಾಪಣ್ಣ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಹಿಂದೆ 2021ರಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸಿ ಬಳಿಕ ಕೇಸ್ ವಾಪಸ್ ಪಡೆಯಲು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಇದೀಗ ಮತ್ತೊಮ್ಮೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪಾಪಣ್ಣ ದೂರಿದ್ದಾರೆ. “ನಾನು ಬಡ ವ್ಯಾಪಾರಿ. ಸುಳ್ಳು ಕೇಸ್‌ಗಳ ಮೂಲಕ ಹಣ ಮಾಡುವ ಕೆಲಸ ನಡೆಯುತ್ತಿದೆ. ನನ್ನ ಕುಟುಂಬ ಹಾಗೂ ತಂಗಿಯನ್ನು ಕಾಪಾಡಿ” ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ನಿನ್ನೆ ರಾತ್ರಿ ಸುಮಾರು 10:05ರ ವೇಳೆಗೆ ವಿಡಿಯೋ ಕಳುಹಿಸಿದ್ದ ಪಾಪಣ್ಣ, ಬಳಿಕ ವಿಷ ಸೇವಿಸಿರುವುದಾಗಿ ತಿಳಿದುಬಂದಿದೆ. ಘಟನೆ ಮಾಹಿತಿ ತಿಳಿದ ತಕ್ಷಣ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತನ ತಂಗಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಭಾಗ್ಯಶ್ರೀ ನೀಡಿದ ದೂರಿನ ಮೇರೆಗೆ, ವಿಡಿಯೋ ಆಧಾರವಾಗಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

10 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

10 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

10 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

10 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

10 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

10 hours ago