Categories: CrimeLatest

ಫೇಕ್ ಅಟ್ರಾಸಿಟಿ ಕೇಸ್ ಆರೋಪ: ಮನನೊಂದು ವಿಷ ಸೇವಿಸಿದ ವ್ಯಾಪಾರಿ ಸಾವು, ಹಲವು ಮಂದಿ ಪೊಲೀಸರ ವಶಕ್ಕೆ

ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಾಪಣ್ಣ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾವಿಗೆ ಮುನ್ನ ವಿಡಿಯೋ ಸಂದೇಶ ದಾಖಲಿಸಿ ಕೆಲವು ಮಂದಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜೋಗಿ ಸೀನಾ, ಪ್ರಶಾಂತ್, ಸಂತೋಷ, ರಾಧಾ ಹಾಗೂ ಲಲಿತ್ ಕುಮಾರ್ ಸೇರಿದಂತೆ ಅವರ ಕುಟುಂಬದವರೇ ನನ್ನ ಸಾವಿಗೆ ಕಾರಣ ಎಂದು ಪಾಪಣ್ಣ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಹಿಂದೆ 2021ರಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸಿ ಬಳಿಕ ಕೇಸ್ ವಾಪಸ್ ಪಡೆಯಲು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಇದೀಗ ಮತ್ತೊಮ್ಮೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪಾಪಣ್ಣ ದೂರಿದ್ದಾರೆ. “ನಾನು ಬಡ ವ್ಯಾಪಾರಿ. ಸುಳ್ಳು ಕೇಸ್‌ಗಳ ಮೂಲಕ ಹಣ ಮಾಡುವ ಕೆಲಸ ನಡೆಯುತ್ತಿದೆ. ನನ್ನ ಕುಟುಂಬ ಹಾಗೂ ತಂಗಿಯನ್ನು ಕಾಪಾಡಿ” ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ನಿನ್ನೆ ರಾತ್ರಿ ಸುಮಾರು 10:05ರ ವೇಳೆಗೆ ವಿಡಿಯೋ ಕಳುಹಿಸಿದ್ದ ಪಾಪಣ್ಣ, ಬಳಿಕ ವಿಷ ಸೇವಿಸಿರುವುದಾಗಿ ತಿಳಿದುಬಂದಿದೆ. ಘಟನೆ ಮಾಹಿತಿ ತಿಳಿದ ತಕ್ಷಣ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತನ ತಂಗಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಭಾಗ್ಯಶ್ರೀ ನೀಡಿದ ದೂರಿನ ಮೇರೆಗೆ, ವಿಡಿಯೋ ಆಧಾರವಾಗಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ತಾಯಿ-ಮಗಳು ಪ್ರೇಮಕಥೆಯ ಶಾಕ್ ಟ್ವಿಸ್ಟ್: ಒಂದೇ ಕುಟುಂಬದಲ್ಲಿ ಬಯಲಾದ ಅಕ್ರಮ ಸಂಬಂಧದ ಜಾಲ, ತಾಯಿ ಸಾವಿನಲ್ಲಿ ಅಂತ್ಯ!

ಜೈಪುರದ ಅರಂಗೇರಿ ಪ್ರದೇಶದಲ್ಲಿ ನಡೆದ ವಿಚಿತ್ರ ಘಟನೆ ಕುಟುಂಬದೊಳಗಿನ ಅಕ್ರಮ ಸಂಬಂಧಗಳ ಜಾಲವನ್ನು ಬಹಿರಂಗಪಡಿಸಿದ್ದು, ಕೊನೆಗೆ ಮಹಿಳೆಯೊಬ್ಬಳ ಸಾವಿನಲ್ಲಿ ಅಂತ್ಯಗೊಂಡಿದೆ.…

1 hour ago

ಬೈಕ್ ಪಾರ್ಕಿಂಗ್ ಜಗಳಕ್ಕೆ ರಕ್ತರಂಜಿತ ಅಂತ್ಯ: ಮಹಿಳೆ ಹತ್ಯೆ, ಪತಿ ಗಂಭೀರ

ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ಬೈಕ್ ಪಾರ್ಕಿಂಗ್ ವಿಚಾರವಾಗಿ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ…

1 hour ago

ಪತ್ನಿಯೊಂದಿಗೆ ಸಂಬಂಧದ ಶಂಕೆ: ವ್ಯಕ್ತಿಯ ಹತ್ಯೆ, ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ…

1 hour ago

ಗೋಹತ್ಯೆ ಪ್ರಕರಣಗಳ ಹಿನ್ನೆಲೆ: ಭಟ್ಕಳದ ಇಸ್ಮಾಯಿಲ್ ಹವ್ವಾ 6 ತಿಂಗಳು ಗಡಿಪಾರು, ರಾಯಚೂರಿಗೆ ಸ್ಥಳಾಂತರ

ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಸಾನಗರ ನಿವಾಸಿ ಇಸ್ಮಾಯಿಲ್ ಹವ್ವಾ (46) ಅವರನ್ನು ಆರು ತಿಂಗಳ ಅವಧಿಗೆ…

1 hour ago

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ…

1 day ago

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ

ಕಡೂರು: ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ…

1 day ago