ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ಐ) ತುರ್ತು ಚಿಕಿತ್ಸಾ ವಿಭಾಗದ ಹಿರಿಯ ವೈದ್ಯಾಧಿಕಾರಿ ಡಾ. ಕೆ.ಎನ್. ಶಂಕರ್ ಅವರನ್ನು ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕೃತ ಆದೇಶವನ್ನು ಹೊರಡಿಸಿದೆ.
ಸಂಸ್ಥೆಯ ನಿರ್ದೇಶಕರು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲ್ಲಿಸಿದ ವರದಿಯಲ್ಲಿ, ಡಾ. ಶಂಕರ್ ನಕಲಿ ಪ್ರಮಾಣಪತ್ರ ನೀಡಿದದ್ದು ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳನ್ನು ದಾಖಲಿಸಿದ್ದಾರೆ. ಸಂಬಂಧಿಸಿದ ತನಿಖಾ ವರದಿ ಮೇರೆಗೆ, ಬೋಧಕೇತರ ಗ್ರೂಪ್ ಎ ಹುದ್ದೆಗಳ ವಿಷಯದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿಯವರೇ ಸಕ್ಸಮ ಪ್ರಾಧಿಕಾರರಾಗಿದ್ದು, ಅವರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದರು.
ಇದಕ್ಕೆ ಅನುಗುಣವಾಗಿ, ಕರ್ನಾಟಕ ನಾಗರೀಕ ಸೇವಾ ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ ನಿಯಮಗಳು ಹಾಗೂ ಬಿಎಂಸಿಆರ್ಐಯ ನಿಗದಿತ ನಿಯಮಕಾತಿ ಪ್ರಕ್ರಿಯೆಗಳಡಿ ಡಾ. ಶಂಕರ್ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಲಾಗಿದೆ.
ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ತನಿಖೆಯನ್ನು ಮುಂದುವರೆಸಲಾಗುತ್ತಿದ್ದು, ಆರೋಪ ಸಾಬೀತಾದಲ್ಲಿ ಮುಂದಿನ ಹಂತದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಮೂಲಗಳು ತಿಳಿಸಿವೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…